ಬ್ರೇಕಿಂಗ್ ನ್ಯೂಸ್
02-07-21 03:41 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 2: ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ ಡಿಓ ಸಂಸ್ಥೆಯ ವಿಜ್ಞಾನಿ, ಎಚ್ಎಎಲ್ ಸಂಸ್ಥೆಯ ನಿವೃತ್ತ ಇಂಜಿನಿಯರ್ ಆಗಿರುವ ಹಾಲ್ದೊಡ್ಡೇರಿ ಸುಧೀಂದ್ರ (61) ನಿಧನರಾಗಿದ್ದಾರೆ.
ಒಂದು ವಾರದ ಹಿಂದೆ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಆಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ತುರ್ತು ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರು. ತೀವ್ರ ಆಘಾತವಾಗಿದ್ದರಿಂದ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು ಎಂದು ವೈದ್ಯರು ತಿಳಿಸಿದ್ದರು.
ಆದರೆ, ಒಂದು ವಾರ ಕಾಲ ಅವರನ್ನು ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಬ್ರೇನ್ ಡೆಡ್ ಆಗಿದ್ದರಿಂದ ವೈದ್ಯರು ಇಂದು ಮಧ್ಯಾಹ್ನ ಅವರನ್ನು ನಿಧನರಾಗಿರುವರು ಎಂದು ಘೋಷಿಸಿದ್ದಾರೆ. ಸುದೀರ್ಘ ಕಾಲ ವಿಜ್ಞಾನಿಯಾಗಿದ್ದು, ಡಿಆರ್ ಡಿಓದಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಜೊತೆಗೆ ಮುಂಚೂಣಿಯಲ್ಲಿ ಗುರುತಿಸಲ್ಪಟ್ಟಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು.

ನಿವೃತ್ತಿಯಾಗುವ ಮೊದಲೇ ವಿಜ್ಞಾನದ ಅಂಕಣಗಳಿಂದಲೇ ತುಂಬ ಪ್ರಸಿದ್ಧಿ ಪಡೆದಿದ್ದ ಹಾಲ್ದೊಡ್ಡೇರಿಯವರು ಅಂತರಿಕ್ಷ ವಿಜ್ಞಾನ, ಕ್ಷಿಪಣಿಗಳು, ರಾಕೆಟ್ ಸೈನ್ಸ್, ಜಲ ಮತ್ತು ನೆಲದ ಕೌತುಕಗಳು, ಆಧುನಿಕ ವಿಜ್ಞಾನದ ಕೊಡುಗೆಗಳು ಹೀಗೆ ಹಲವು ವಿಚಾರಗಳಲ್ಲಿ ತಮ್ಮದೇ ಧಾಟಿಯಲ್ಲಿ ಬರೆಯುತ್ತಿದ್ದ ಅಂಕಣಗಳು ಕನ್ನಡದ ಲಕ್ಷಾಂತರ ಓದುಗರನ್ನು ತಲುಪಿದ್ದವು.
ಕೊರೊನಾ ಸಂದರ್ಭದಲ್ಲಿ ಹೃದಯಾಘಾತ ಆಗಿದ್ದರೂ, ಅವರ ಆಘಾತಕ್ಕೆ ಕೊರೊನಾ ಕಾರಣವಾಗಿರಲಿಲ್ಲ. ಕೊರೊನಾ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದರು. ನಾಡಿನ ಉದ್ದಗಲಕ್ಕೂ ಹಾಲ್ದೊಡ್ಡೇರಿ ಅವರು ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
ವಿಜ್ಞಾನಕ್ಕೆ ತನ್ನ ಜ್ಞಾನವನ್ನು ಮುಡಿಪಾಗಿಟ್ಟಿದ್ದ ಸುಧೀಂದ್ರ ಅವರ ದೇಹವನ್ನು ಬೆಂಗಳೂರಿನ ಮೆಡಿಕಲ್ ಕಾಲೇಡಿಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
Former scientist DRDO Haldodderi Sudhindra passes away at (61) in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm