ಬ್ರೇಕಿಂಗ್ ನ್ಯೂಸ್
02-07-21 03:41 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 2: ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ ಡಿಓ ಸಂಸ್ಥೆಯ ವಿಜ್ಞಾನಿ, ಎಚ್ಎಎಲ್ ಸಂಸ್ಥೆಯ ನಿವೃತ್ತ ಇಂಜಿನಿಯರ್ ಆಗಿರುವ ಹಾಲ್ದೊಡ್ಡೇರಿ ಸುಧೀಂದ್ರ (61) ನಿಧನರಾಗಿದ್ದಾರೆ.
ಒಂದು ವಾರದ ಹಿಂದೆ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಆಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ತುರ್ತು ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರು. ತೀವ್ರ ಆಘಾತವಾಗಿದ್ದರಿಂದ ಮೆದುಳಿಗೆ ರಕ್ತ ಪೂರೈಕೆ ಸ್ಥಗಿತಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು ಎಂದು ವೈದ್ಯರು ತಿಳಿಸಿದ್ದರು.
ಆದರೆ, ಒಂದು ವಾರ ಕಾಲ ಅವರನ್ನು ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಬ್ರೇನ್ ಡೆಡ್ ಆಗಿದ್ದರಿಂದ ವೈದ್ಯರು ಇಂದು ಮಧ್ಯಾಹ್ನ ಅವರನ್ನು ನಿಧನರಾಗಿರುವರು ಎಂದು ಘೋಷಿಸಿದ್ದಾರೆ. ಸುದೀರ್ಘ ಕಾಲ ವಿಜ್ಞಾನಿಯಾಗಿದ್ದು, ಡಿಆರ್ ಡಿಓದಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಜೊತೆಗೆ ಮುಂಚೂಣಿಯಲ್ಲಿ ಗುರುತಿಸಲ್ಪಟ್ಟಿದ್ದ ಹಾಲ್ದೊಡ್ಡೇರಿ ಸುಧೀಂದ್ರ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು.

ನಿವೃತ್ತಿಯಾಗುವ ಮೊದಲೇ ವಿಜ್ಞಾನದ ಅಂಕಣಗಳಿಂದಲೇ ತುಂಬ ಪ್ರಸಿದ್ಧಿ ಪಡೆದಿದ್ದ ಹಾಲ್ದೊಡ್ಡೇರಿಯವರು ಅಂತರಿಕ್ಷ ವಿಜ್ಞಾನ, ಕ್ಷಿಪಣಿಗಳು, ರಾಕೆಟ್ ಸೈನ್ಸ್, ಜಲ ಮತ್ತು ನೆಲದ ಕೌತುಕಗಳು, ಆಧುನಿಕ ವಿಜ್ಞಾನದ ಕೊಡುಗೆಗಳು ಹೀಗೆ ಹಲವು ವಿಚಾರಗಳಲ್ಲಿ ತಮ್ಮದೇ ಧಾಟಿಯಲ್ಲಿ ಬರೆಯುತ್ತಿದ್ದ ಅಂಕಣಗಳು ಕನ್ನಡದ ಲಕ್ಷಾಂತರ ಓದುಗರನ್ನು ತಲುಪಿದ್ದವು.
ಕೊರೊನಾ ಸಂದರ್ಭದಲ್ಲಿ ಹೃದಯಾಘಾತ ಆಗಿದ್ದರೂ, ಅವರ ಆಘಾತಕ್ಕೆ ಕೊರೊನಾ ಕಾರಣವಾಗಿರಲಿಲ್ಲ. ಕೊರೊನಾ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದರು. ನಾಡಿನ ಉದ್ದಗಲಕ್ಕೂ ಹಾಲ್ದೊಡ್ಡೇರಿ ಅವರು ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
ವಿಜ್ಞಾನಕ್ಕೆ ತನ್ನ ಜ್ಞಾನವನ್ನು ಮುಡಿಪಾಗಿಟ್ಟಿದ್ದ ಸುಧೀಂದ್ರ ಅವರ ದೇಹವನ್ನು ಬೆಂಗಳೂರಿನ ಮೆಡಿಕಲ್ ಕಾಲೇಡಿಗೆ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
Former scientist DRDO Haldodderi Sudhindra passes away at (61) in Bengaluru.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm