ಬ್ರೇಕಿಂಗ್ ನ್ಯೂಸ್
01-09-20 06:23 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 1 : ನಮಗೆ ರೈಸ್ ದಾಲ್ ಗೊತ್ತು. ಬಟ್ ಡ್ರಗ್ಸ್ ಬಗ್ಗೆ ಗೊತ್ತಿಲ್ಲ.. ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ಬಗ್ಗೆ ಮಾತಾಡಲ್ಲ.. ಹೀಗೆಂದವರು ಸ್ಯಾಂಡಲ್ವುಡ್ಡಿನ ಖ್ಯಾತ ನಟ ಸುದೀಪ್.
ಸಿದ್ಧಗಂಗಾ ಮಠಕ್ಕೆ ಆಗಮಿಸಿದ್ದ ನಟ ಸುದೀಪ್, ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ಬಗ್ಗೆ ಕೇಳಿದ ಪ್ರಶ್ನೆಗೆ ಗರಂ ಆಗಿದ್ದಾರೆ. ರೈಸ್ ದಾಲ್ ತಿಂದು ಜೀವನ ಮಾಡಿದ್ದೀನಿ.. ಆದರೆ ಡ್ರಗ್ಸ್ ಬಗ್ಗೆ ನಂಗೆ ಗೊತ್ತೇ ಇಲ್ಲ. ಅದರ ಬಗ್ಗೆ ಚರ್ಚೆನೂ ಮಾಡಲ್ಲ. ಚರ್ಚೆ ಮಾಡೋದೂ ತಪ್ಪಾಗುತ್ತೆ. ಈವಾಗ ನಡೀತಿರೋ ವಿಷ್ಯದ ಬಗ್ಗೆ ಮಾತಾಡೋದೂ ತಪ್ಪು ಆಗತ್ತೆ. ಡ್ರಗ್ಸ್ ಚಿತ್ರರಂಗಕ್ಕೆ ಕಳಂಕ ಅನ್ನೋದು ಕೂಡ ತಪ್ಪು.. ಆದರೆ ಸಮಸ್ಯೆ ಏನಿದ್ದರೂ ಸಾಲ್ವ್ ಆಗುತ್ತೆ. ಹಾಗಂತ ಇಲ್ಲದೇ ಇರೋದನ್ನ ಲಿಂಕ್ ಕೊಟ್ಟು ಮಾತಾಡಬಾರದು ಅಂತ ಸುದೀಪ್ ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಹೇಳಿಕೆ ಕೊಟ್ಟಿದ್ದಾರೆ.

ಚಿರಂಜೀವಿ ಸಾವಿಗೆ ಡ್ರಗ್ಸ್ ಕಾರಣವಾಗಿತ್ತಾ ಎಂಬ ಪ್ರಶ್ನೆಗೆ, ಚಿರಂಜೀವಿ ನನ್ನ ತಮ್ಮನ ಥರ. ಡ್ರಗ್ ನಲ್ಲಿ ಅವನ ಹೆಸರು ಥಳಕು ಹಾಕೋದು ಸರಿ ಕಾಣೋದಿಲ್ಲ ಎಂದಿದ್ದಾರೆ. ಇನ್ನು ನಟ ಚೇತನ್ ಟ್ವೀಟ್ ಕುರಿತ ಪ್ರಶ್ನೆಗೆ ಸುದೀಪ್ ವ್ಯಂಗ್ಯದ ನಗೆ ಬೀರಿದ್ದಾರೆ. ಬಹುಶಃ ಅವರು ಪ್ರಧಾನಿ ಮೋದಿ ಬಗ್ಗೆ ಮಾತಾಡಿರಬೇಕು ಎಂದು ಲೇವಡಿ ಆಡಿದ್ರು. ರಮ್ಮಿ ಆಡೋರು, ಗುಟ್ಕಾ ತಿನ್ನೋರ ಬಗ್ಗೆ ಯಾರೂ ಹೇಳಲ್ಲ ಎಂದು ನಟ ಚೇತನ್ ಟ್ವೀಟ್ ಮಾಡಿ ಕುಟುಕಿದ್ದರು.
ಮಾಧ್ಯಮಗಳು ಕೆಲ ಅನಾವಶ್ಯಕ ವಿಚಾರಗಳನ್ನು ಕೆದಕಿ ಜೀವಂತ ಇಡುತ್ತಿದೆ ಎಂದು ಕಟಕಿಯಾಡಿದ ಸುದೀಪ್, ಇಂದ್ರಜಿತ್ ಗೆ ಬೆದರಿಕೆ ಕರೆಯ ವಿಚಾರದಲ್ಲಿ ಅವರ ಬೆಂಬಲಕ್ಕೆ ನಿಲ್ತೀರಾ ಎಂಬ ಪ್ರಶ್ನೆಗೆ, ಬೇರೆಯದ್ದೇ ಕೋನದಲ್ಲಿ ಮಾತಾಡಿದ್ದಾರೆ. ಇಂದ್ರಜಿತ್ ಅವರ ಇಡೀ ಲೈಫ್ ನಾನಿಲ್ಲದೆ ಸಾಗಿದೆ. ಅವರು ನನಗಾಗಿ ಇಲ್ಲ... ನಾನೂ ಅವರಿಗಾಗಿ ಇಲ್ಲ.. ಬಟ್ ಅದಕ್ಕೆಲ್ಲಾ ಅವರು ಹೆದರಲ್ಲ ಎಂದು ಹೇಳಿದ್ರು.
ಇನ್ನು ಕೊರೋನಾದಿಂದಾಗಿ ಚಿತ್ರರಂಗ ತುಂಬಾ ನಷ್ಟದಲ್ಲಿದೆ. ನಿರ್ಮಾಪಕರು, ಕಾರ್ಮಿಕರು ಎಲ್ಲರೂ ಸಂಕಷ್ಟದಲ್ಲಿ ಇದ್ದಾರೆ. ಇಂಥ ಸಂದರ್ಭದಲ್ಲಿ ಕೊರೊನೋತ್ತರದಲ್ಲಿ ಇಂಡಸ್ಟ್ರಿಯ ಭವಿಷ್ಯದ ಬಗ್ಗೆ ನಾವು ಚಿಂತನೆ ಮಾಡಬೇಕಿದೆ ಎಂದರು ಸುದೀಪ್.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm