ಬ್ರೇಕಿಂಗ್ ನ್ಯೂಸ್
02-07-21 04:44 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2: ದಕ್ಷಿಣ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಾರೀ ಶಬ್ದ ಕೇಳಿಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಏನೋ ದೊಡ್ಡ ಕಟ್ಟಡ ಕುಸಿದು ಬಿದ್ದ ರೀತಿ ಅಥವಾ ಏನೋ ಸ್ಫೋಟ ಆಗಿರುವ ರೀತಿ ಐದು ಸೆಕೆಂಡು ಕಾಲ ಶಬ್ದ ಕೇಳಿಸಿದ್ದು, ಈ ಬಗ್ಗೆ ಜನರು ಆತಂಕಗೊಂಡಿದ್ದರೂ ಜಿಲ್ಲಾಡಳಿತದಿಂದ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.
ಅಪಾರ್ಟ್ಮೆಂಟ್ ಒಳಗಿದ್ದವರು, ಹೊರಗೆ ಅಂಗಡಿ ಇನ್ನಿತರ ವಾಣಿಜ್ಯ ಸಂಕೀರ್ಣದಲ್ಲಿ ಇದ್ದವರು ವಿಚಿತ್ರ ರೀತಿಯ ಸದ್ದನ್ನು ಕೇಳಿದ್ದಾರೆ. ಏನೋ ಶಬ್ದ ಕೇಳಿದ್ದು, ಭೂಕಂಪ ಆಗಿದೆಯೋ ಎನ್ನುವಂತೆ ಭಯ ಆಗಿದ್ದಾಗಿ ಜನರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಎಚ್ಎಎಲ್ ಅಧಿಕಾರಿಗಳಲ್ಲಿ ಕೇಳಿದರೆ, ನಮ್ಮಲ್ಲಿ ಎಂದಿನಂತೆ ವಿಮಾನಗಳ ಪರೀಕ್ಷೆಗಳು ನಡೆಯುತ್ತಿವೆ. ಅದು ಬಿಟ್ಟರೆ ವಿಶೇಷ ಶಬ್ದವೇನೂ ನಮ್ಮಲ್ಲಿ ಬಂದಿಲ್ಲ ಎಂದಿದ್ದಾರೆ.
ಇದೇ ವೇಳೆ, ಇದು ಭೂಕಂಪದಿಂದ ಆಗಿರುವ ಶಬ್ದ ಅಲ್ಲ ಎಂದು ವಿಪತ್ತು ನಿರ್ವಹಣಾ ಪಡೆ ಅಧಿಕಾರಿಗಳು ಹೇಳಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಇದೇ ರೀತಿ ಶಬ್ದ ಕೇಳಿಬಂದಿತ್ತು. ಆನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರಕ್ಷಣಾ ಇಲಾಖೆಯ ಎಚ್ಎಎಲ್ ಅಧಿಕಾರಿಗಳು, ಅದು ಸೂಪರ್ ಸಾನಿಕ್ ವಿಮಾನದಿಂದ ಆಗಿರುವ ಶಬ್ದ ಎಂದು ಹೇಳಿದ್ದರು.
ಇದೀಗ ಒಂದು ವರ್ಷದ ಬಳಿಕ ಅದೇ ಸಮಯದಲ್ಲಿ ಅದೇ ರೀತಿಯ ವಿಚಿತ್ರ ಶಬ್ದ ಕೇಳಿಬಂದಿದ್ದು, ಜಯನಗರ, ಕುಮಾರಸ್ವಾಮಿ ಲೇಔಟ್, ಮಡಿವಾಳ, ಪರಪ್ಪನ ಅಗ್ರಹಾರ, ಆನೇಕಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ಚಂದ್ರಾ ಲೇಔಟ್ ಹೀಗೆ ಬೆಂಗಳೂರಿನ ಹಲವೆಡೆ ಜನರು ಶಬ್ದ ಕೇಳಿದ್ದಾಗಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಯಾವುದೇ ರೀತಿಯ ದೃಢೀಕರಣ ನೀಡದೇ ಇರುವ ಹಿನ್ನೆಲೆಯಲ್ಲಿ ವಿಚಿತ್ರ ಶಬ್ದ ಬಂದಿದ್ದರ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಎದ್ದಿದೆ.
Boom Sound 🤔
— MALIK K (@MALIK_K_IYC) May 20, 2020
Anyone is aware what happened in #Bangalore #sonicboom
ಭಯಾನಕ ಶಬ್ಧ !!! ಏನದು......? pic.twitter.com/LtkMswCkZA
A loud sound was heard in South Bengaluru on Friday afternoon, bringing back memories of the sonic boom of last year. Hindustan Aeronautics Ltd (HAL) has said that there was no unusual activity on its part that may have caused the bang.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 07:58 pm
Mangalore Correspondent
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm