ಬ್ರೇಕಿಂಗ್ ನ್ಯೂಸ್
02-07-21 04:44 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2: ದಕ್ಷಿಣ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಾರೀ ಶಬ್ದ ಕೇಳಿಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಏನೋ ದೊಡ್ಡ ಕಟ್ಟಡ ಕುಸಿದು ಬಿದ್ದ ರೀತಿ ಅಥವಾ ಏನೋ ಸ್ಫೋಟ ಆಗಿರುವ ರೀತಿ ಐದು ಸೆಕೆಂಡು ಕಾಲ ಶಬ್ದ ಕೇಳಿಸಿದ್ದು, ಈ ಬಗ್ಗೆ ಜನರು ಆತಂಕಗೊಂಡಿದ್ದರೂ ಜಿಲ್ಲಾಡಳಿತದಿಂದ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.
ಅಪಾರ್ಟ್ಮೆಂಟ್ ಒಳಗಿದ್ದವರು, ಹೊರಗೆ ಅಂಗಡಿ ಇನ್ನಿತರ ವಾಣಿಜ್ಯ ಸಂಕೀರ್ಣದಲ್ಲಿ ಇದ್ದವರು ವಿಚಿತ್ರ ರೀತಿಯ ಸದ್ದನ್ನು ಕೇಳಿದ್ದಾರೆ. ಏನೋ ಶಬ್ದ ಕೇಳಿದ್ದು, ಭೂಕಂಪ ಆಗಿದೆಯೋ ಎನ್ನುವಂತೆ ಭಯ ಆಗಿದ್ದಾಗಿ ಜನರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಎಚ್ಎಎಲ್ ಅಧಿಕಾರಿಗಳಲ್ಲಿ ಕೇಳಿದರೆ, ನಮ್ಮಲ್ಲಿ ಎಂದಿನಂತೆ ವಿಮಾನಗಳ ಪರೀಕ್ಷೆಗಳು ನಡೆಯುತ್ತಿವೆ. ಅದು ಬಿಟ್ಟರೆ ವಿಶೇಷ ಶಬ್ದವೇನೂ ನಮ್ಮಲ್ಲಿ ಬಂದಿಲ್ಲ ಎಂದಿದ್ದಾರೆ.


ಇದೇ ವೇಳೆ, ಇದು ಭೂಕಂಪದಿಂದ ಆಗಿರುವ ಶಬ್ದ ಅಲ್ಲ ಎಂದು ವಿಪತ್ತು ನಿರ್ವಹಣಾ ಪಡೆ ಅಧಿಕಾರಿಗಳು ಹೇಳಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಇದೇ ರೀತಿ ಶಬ್ದ ಕೇಳಿಬಂದಿತ್ತು. ಆನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರಕ್ಷಣಾ ಇಲಾಖೆಯ ಎಚ್ಎಎಲ್ ಅಧಿಕಾರಿಗಳು, ಅದು ಸೂಪರ್ ಸಾನಿಕ್ ವಿಮಾನದಿಂದ ಆಗಿರುವ ಶಬ್ದ ಎಂದು ಹೇಳಿದ್ದರು.
ಇದೀಗ ಒಂದು ವರ್ಷದ ಬಳಿಕ ಅದೇ ಸಮಯದಲ್ಲಿ ಅದೇ ರೀತಿಯ ವಿಚಿತ್ರ ಶಬ್ದ ಕೇಳಿಬಂದಿದ್ದು, ಜಯನಗರ, ಕುಮಾರಸ್ವಾಮಿ ಲೇಔಟ್, ಮಡಿವಾಳ, ಪರಪ್ಪನ ಅಗ್ರಹಾರ, ಆನೇಕಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ಚಂದ್ರಾ ಲೇಔಟ್ ಹೀಗೆ ಬೆಂಗಳೂರಿನ ಹಲವೆಡೆ ಜನರು ಶಬ್ದ ಕೇಳಿದ್ದಾಗಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಯಾವುದೇ ರೀತಿಯ ದೃಢೀಕರಣ ನೀಡದೇ ಇರುವ ಹಿನ್ನೆಲೆಯಲ್ಲಿ ವಿಚಿತ್ರ ಶಬ್ದ ಬಂದಿದ್ದರ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಎದ್ದಿದೆ.
Boom Sound 🤔
— MALIK K (@MALIK_K_IYC) May 20, 2020
Anyone is aware what happened in #Bangalore #sonicboom
ಭಯಾನಕ ಶಬ್ಧ !!! ಏನದು......? pic.twitter.com/LtkMswCkZA
A loud sound was heard in South Bengaluru on Friday afternoon, bringing back memories of the sonic boom of last year. Hindustan Aeronautics Ltd (HAL) has said that there was no unusual activity on its part that may have caused the bang.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm