ಬ್ರೇಕಿಂಗ್ ನ್ಯೂಸ್
02-07-21 04:44 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2: ದಕ್ಷಿಣ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಾರೀ ಶಬ್ದ ಕೇಳಿಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಏನೋ ದೊಡ್ಡ ಕಟ್ಟಡ ಕುಸಿದು ಬಿದ್ದ ರೀತಿ ಅಥವಾ ಏನೋ ಸ್ಫೋಟ ಆಗಿರುವ ರೀತಿ ಐದು ಸೆಕೆಂಡು ಕಾಲ ಶಬ್ದ ಕೇಳಿಸಿದ್ದು, ಈ ಬಗ್ಗೆ ಜನರು ಆತಂಕಗೊಂಡಿದ್ದರೂ ಜಿಲ್ಲಾಡಳಿತದಿಂದ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.
ಅಪಾರ್ಟ್ಮೆಂಟ್ ಒಳಗಿದ್ದವರು, ಹೊರಗೆ ಅಂಗಡಿ ಇನ್ನಿತರ ವಾಣಿಜ್ಯ ಸಂಕೀರ್ಣದಲ್ಲಿ ಇದ್ದವರು ವಿಚಿತ್ರ ರೀತಿಯ ಸದ್ದನ್ನು ಕೇಳಿದ್ದಾರೆ. ಏನೋ ಶಬ್ದ ಕೇಳಿದ್ದು, ಭೂಕಂಪ ಆಗಿದೆಯೋ ಎನ್ನುವಂತೆ ಭಯ ಆಗಿದ್ದಾಗಿ ಜನರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಎಚ್ಎಎಲ್ ಅಧಿಕಾರಿಗಳಲ್ಲಿ ಕೇಳಿದರೆ, ನಮ್ಮಲ್ಲಿ ಎಂದಿನಂತೆ ವಿಮಾನಗಳ ಪರೀಕ್ಷೆಗಳು ನಡೆಯುತ್ತಿವೆ. ಅದು ಬಿಟ್ಟರೆ ವಿಶೇಷ ಶಬ್ದವೇನೂ ನಮ್ಮಲ್ಲಿ ಬಂದಿಲ್ಲ ಎಂದಿದ್ದಾರೆ.


ಇದೇ ವೇಳೆ, ಇದು ಭೂಕಂಪದಿಂದ ಆಗಿರುವ ಶಬ್ದ ಅಲ್ಲ ಎಂದು ವಿಪತ್ತು ನಿರ್ವಹಣಾ ಪಡೆ ಅಧಿಕಾರಿಗಳು ಹೇಳಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಇದೇ ರೀತಿ ಶಬ್ದ ಕೇಳಿಬಂದಿತ್ತು. ಆನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರಕ್ಷಣಾ ಇಲಾಖೆಯ ಎಚ್ಎಎಲ್ ಅಧಿಕಾರಿಗಳು, ಅದು ಸೂಪರ್ ಸಾನಿಕ್ ವಿಮಾನದಿಂದ ಆಗಿರುವ ಶಬ್ದ ಎಂದು ಹೇಳಿದ್ದರು.
ಇದೀಗ ಒಂದು ವರ್ಷದ ಬಳಿಕ ಅದೇ ಸಮಯದಲ್ಲಿ ಅದೇ ರೀತಿಯ ವಿಚಿತ್ರ ಶಬ್ದ ಕೇಳಿಬಂದಿದ್ದು, ಜಯನಗರ, ಕುಮಾರಸ್ವಾಮಿ ಲೇಔಟ್, ಮಡಿವಾಳ, ಪರಪ್ಪನ ಅಗ್ರಹಾರ, ಆನೇಕಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ಚಂದ್ರಾ ಲೇಔಟ್ ಹೀಗೆ ಬೆಂಗಳೂರಿನ ಹಲವೆಡೆ ಜನರು ಶಬ್ದ ಕೇಳಿದ್ದಾಗಿ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಯಾವುದೇ ರೀತಿಯ ದೃಢೀಕರಣ ನೀಡದೇ ಇರುವ ಹಿನ್ನೆಲೆಯಲ್ಲಿ ವಿಚಿತ್ರ ಶಬ್ದ ಬಂದಿದ್ದರ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಎದ್ದಿದೆ.
Boom Sound 🤔
— MALIK K (@MALIK_K_IYC) May 20, 2020
Anyone is aware what happened in #Bangalore #sonicboom
ಭಯಾನಕ ಶಬ್ಧ !!! ಏನದು......? pic.twitter.com/LtkMswCkZA
A loud sound was heard in South Bengaluru on Friday afternoon, bringing back memories of the sonic boom of last year. Hindustan Aeronautics Ltd (HAL) has said that there was no unusual activity on its part that may have caused the bang.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm