ಬ್ರೇಕಿಂಗ್ ನ್ಯೂಸ್
03-07-21 12:05 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜುಲೈ 3: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಮತ್ತು ಶಾಸಕ ಎಂ.ಪಿ ಕುಮಾರಸ್ವಾಮಿ ಅವರನ್ನು ಮೂಡಿಗೆರೆ ತಾಲೂಕಿನ ಮಲೆಮನೆಯ ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
2019ರಲ್ಲಿ ಮಹಾಮಳೆಗೆ ಗುಡ್ಡ ಕುಸಿದು ಮನೆಗಳು ಮತ್ತು ಅಪಾರ ಆಸ್ತಿಯನ್ನು ಕಳಕೊಂಡಿದ್ದ ನಿವಾಸಿಗಳು ತಮಗೆ ಮನೆ ಕಟ್ಟಿ ಕೊಡದ ಸರಕಾರಿ ಅಧಿಕಾರಿಗಳ ಸಚಿವರು ಮತ್ತು ಶಾಸಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೂರು ವರ್ಷವಾದರೂ ಮನೆಕಟ್ಟಿ ಕೊಟ್ಟಿಲ್ಲ. ಪ್ರತಿ ಬಾರಿ ಅಧಿಕಾರಿಗಳಿಗೆ, ಶಾಸಕರಿಗೆ ಮನವಿ ಕೊಡುವುದೇ ಆಯ್ತು. ಅಂದು ಸಿಎಂ ಬಂದು ಆಶ್ವಾಸನೆ ಕೊಟ್ಟು ಹೋಗಿದ್ದರು. ಯಾವುದೇ ಪರಿಹಾರವೂ ಸಿಕ್ಕಿಲ್ಲ. ಮನೆ ಕಟ್ಟಿ ಕೊಡುತ್ತೇವೆ ಎಂದಿದ್ದೂ ಆಗಿಲ್ಲ. ಆಗಲ್ಲ ಅಂದ್ರೆ ಹಾಗೇ ಹೇಳಿ. ಹೇಗೋ ಭಿಕ್ಷೆ ಬೇಡಿ ಬದುಕುತ್ತೇವೆ. ನೀವು ಮತ್ತೆ ಆಶ್ವಾಸನೆಯ ಮಾತುಗಳನ್ನು ಆಡಬೇಡಿ ಎಂದು ಸಂತ್ರಸ್ತರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
2019ರಲ್ಲಿ ಮಳೆಗಾಲದಲ್ಲಿ ಮಲೆಮನೆ, ಮಧುಗಿರಿ ಬೆಟ್ಟಗಳು ಕುಸಿದು ಅಲ್ಲಿನ ತಪ್ಪಲು ಭಾಗದಲ್ಲಿದ್ದ 5 ಮನೆಗಳು ಮತ್ತು 40 ಎಕರೆ ಜಮೀನು ಸಂಪೂರ್ಣ ಕೊಚ್ಚಿ ಹೋಗಿತ್ತು. ಪ್ರವಾಹದ ಬಳಿಕ ಗ್ರಾಮಕ್ಕೆ ಭೇಟಿ ನೀಡಿದ್ದ ಸಿಎಂ ಯಡಿಯೂರಪ್ಪ ಮನೆ ಕಟ್ಟಿಕೊಡುವ ಭರವಸೆ ನೀಡಿ ಹೋಗಿದ್ದರು. ಆದರೆ ಇಲ್ಲಿಯವರೆಗೂ ಸಂತ್ರಸ್ತರಿಗೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದ ಕಾರಣ, ಈ ಬಾರಿ ಹೊಸತಾಗಿ ಸಚಿವರಾಗಿ ಗ್ರಾಮಕ್ಕೆ ಭೇಟಿ ನೀಡಿದ್ದ ಅಂಗಾರ ಅವರಲ್ಲಿ ಜನರು ತಮ್ಮ ಅಹವಾಲು ಹೇಳಿಕೊಂಡಿದ್ದಾರೆ.
ಎತ್ತಿನಹೊಳೆ ಯೋಜನೆಯೇ ಕಾರಣ !
ಅಂದು ಕೊಡಗು, ಚಿಕ್ಕಮಗಳೂರು ಮತ್ತು ಬೆಳ್ತಂಗಡಿ ಭಾಗದಲ್ಲಿ ಅಲ್ಲಲ್ಲಿ ಗುಡ್ಡ ಕುಸಿದು ಭಾರೀ ಭೂಕುಸಿತ ರೀತಿಯ ಘಟನೆಗಳು ನಡೆದಿದ್ದು ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಜನರನ್ನು ಆತಂಕಕ್ಕೆ ಈಡು ಮಾಡಿತ್ತು. ಆನಂತರ ಈ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರು ಪಶ್ಚಿಮ ಘಟ್ಟಗಳಲ್ಲಿ ಮಾನವ ಕೃತ ಯೋಜನೆಗಳೇ ಈ ರೀತಿಯ ಅನಾಹುತಕ್ಕೆ ಕಾರಣ ಎಂದಿದ್ದರು. ಪರೋಕ್ಷವಾಗಿ ಎತ್ತಿನಹೊಳೆ ಯೋಜನೆ ಬಗ್ಗೆ ಬೊಟ್ಟು ಮಾಡಿದ್ದರು. ಈ ಯೋಜನೆ ಕೈಗೆತ್ತಿಕೊಂಡು ಸಾವಿರಾರು ಹೆಕ್ಟೇರ್ ವ್ಯಾಪ್ತಿಯಲ್ಲಿ ಅರಣ್ಯ ನಾಶ ಮಾಡಿದ್ದು ಮತ್ತು ಅಲ್ಲಿನ ಬೆಟ್ಟಗಳನ್ನು ಅಗೆದು ಅಣೆಕಟ್ಟು ಕಟ್ಟಿ ಅರಣ್ಯ ಭಾಗದ ಸಹಜ ನೀರಿನ ಇಂಗುವಿಕೆಗೆ ತಡೆ ಹಾಕಿದ್ದು ಈ ರೀತಿಯ ವೈಪರೀತ್ಯಕ್ಕೆ ಕಾರಣವಾಗಿತ್ತು. ಸರಕಾರದ ಅವೈಜ್ಞಾನಿಕ ನೀತಿಗಳ ಪರಿಣಾಮ ಸಾಮಾನ್ಯ ಜನರು ಬೆಲೆ ತೆರುವಂತಾಗಿದೆ. ಈಗ ಶಾಸಕರು, ಸಚಿವರಿಗೆ ಅದರ ಬಿಸಿ ಮುಟ್ಟತೊಡಗಿದ್ದರೆ ಅದರಲ್ಲಿ ಅಚ್ಚರಿಯಿಲ್ಲ. ಪ್ರತಿ ಮಳೆಗಾಲದಲ್ಲಿ ಅಲ್ಲಿನ ಜನರು ಆತಂಕದಲ್ಲಿ ಜೀವನ ನಡೆಸುವ ಸ್ಥಿತಿ ಎದುರಾಗಿದ್ದರೆ ಅದಕ್ಕೆ ಸರಕಾರದ ಅವೈಜ್ಞಾನಿಕ ನೀತಿಗಳು ಮತ್ತು ನಿರ್ಲಜ್ಜ ಅಧಿಕಾರಸ್ಥರೇ ಕಾರಣ ಎನ್ನುವ ಸತ್ಯ ಸಾಬೀತಾಗುತ್ತಿದೆ.
Video:
Chikmagalur Malemane hill cracks public slam Minister Angara and Kumaraswamy for showing negligence over reconstructing houses which are damaged after the dall of rocks on houses.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm