ಬ್ರೇಕಿಂಗ್ ನ್ಯೂಸ್
03-07-21 12:22 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3 : ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಗೂ ಸಿಡಿ ಭೀತಿ ಶುರುವಾಗಿದ್ಯಾ ಎನ್ನುವ ಅನುಮಾನ ರಾಜಕೀಯ ವಲಯದಲ್ಲಿ ಕೇಳಿಬಂದಿದೆ. ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ದ ತಡೆ ಹೇರಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ಸದಾನಂದ ಗೌಡ ನಿರ್ಬಂಧ ಆದೇಶ ಪಡೆದುಕೊಂಡಿದ್ದಾರೆ.
ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲವು ಪತ್ರಿಕೆ, ಚಾನಲ್ಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಯಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಹಳೆಯ ಉದಾಹರಣೆಗಳನ್ನೂ ನೀಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೋ ಮಾಡಲಾಗಿತ್ತು ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇಂಥ ವಿಡಿಯೋ ಪ್ರಸಾರ ಮಾಡಿದರೆ ಘನತೆಗೆ ಧಕ್ಕೆ ಆಗಲಿದೆ. ಅದರಿಂದ ಚಾರಿತ್ರ್ಯ ವಧೆಯೂ ಆಗಲಿದೆ. ಆದ್ದರಿಂದ ತಮ್ಮ ಬಗ್ಗೆಯೂ ಇಂತಹ ವಿಡಿಯೋ ಪ್ರಸಾರ ಮಾಡುವ ಅಪಾಯವಿದೆ. ಅದಕ್ಕಾಗಿ ಮೊದಲೇ ನಿರ್ಬಂಧ ಹೇರಲು ಮನವಿ ಮಾಡುತ್ತಿದ್ದೇನೆ ಎಂದು ಕೋರ್ಟಿನಲ್ಲಿ ಮನವಿ ಮಾಡಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.
ಇದೇ ವೇಳೆ, ತನ್ನ ನಡೆಯನ್ನು ಟ್ವೀಟ್ ಮೂಲಕ ಸಮರ್ಥಿಸಿಕೊಂಡಿರುವ ಸದಾನಂದ ಗೌಡ, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಹಿಂದೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ಗೌರವಿಸುತ್ತೇನೆ. ಹಾಗೆಂದು ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸಾರ ಮಾಡಬಾರದೆಂದು ನಿರ್ಬಂಧ ಆದೇಶ ತಂದಿದ್ದೇನೆ. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದು ಹೇಳಿದ್ದಾರೆ.
ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು.
— Sadananda Gowda (@DVSadanandGowda) July 2, 2021
ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು
Fear grips Minister DV Sadananda Gowda of Fake CD approaches court over an injunction against Media so that no one aires the fake CD video on television.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm