ಬ್ರೇಕಿಂಗ್ ನ್ಯೂಸ್
03-07-21 04:57 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯನ್ನು ಮಂಗಳೂರು - ಬೆಂಗಳೂರು ನಡುವಿನ ರೈಲಿಗೆ ಜೋಡಿಸಲಾಗಿದ್ದು ಮುಂದಿನ ವಾರದಲ್ಲಿ ಸಂಚಾರಕ್ಕೆ ಲಭಿಸಲಿದೆ.
ಯಶವಂತಪುರ- ಮಂಗಳೂರು ವಿಶೇಷ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಜು.7ರಿಂದ ಸೇರ್ಪಡೆಗೊಳ್ಳಲಿದೆ. ಇದಕ್ಕಾಗಿ ಶನಿವಾರದಿಂದಲೇ (ಜು.3) ಬುಕಿಂಗ್ ಆರಂಭಿಸಲಾಗಿದೆ. ಈ ಬೋಗಿಯ ಪ್ರಯಾಣಕ್ಕೆ ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ.





ಪ್ರಕೃತಿ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟದ ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯ ಬದಲಿಗೆ ಎರಡು ವಿಸ್ಟಾಡೋಮ್ ಕೋಚ್ಗಳನ್ನು ಜೋಡಿಸಲಾಗುತ್ತಿದೆ. ಬೆಂಗಳೂರು- ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದ ವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮಂದಿ ಮನವಿ ಮಾಡಿದ್ದರು. ಅದರ ಪ್ರತಿಫಲದಿಂದ ವಿಸ್ಟಾಡೋಮ್ ರೈಲು ಸಂಚಾರ ಆರಂಭಿಸುತ್ತಿದೆ.
ರೈಲು ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗುವ ವೇಳೆ ಅಲ್ಲಿನ ಘಟ್ಟಗಳ ಸೌಂದರ್ಯವನ್ನು ರೈಲಿನೊಳಗೆ ಕುಳಿತೇ ಸವಿಯುವ ಅವಕಾಶ ಸಿಗಲಿದೆ. ಮಾರ್ಗ ಮಧ್ಯದಲ್ಲಿ ಬರುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು. ಮಳೆಗಾಲ ಆಗಿರುವುದರಿಂದ ಗಾಜಿನ ಬೋಗಿಯ ಪ್ರಯಾಣ ವಿಶೇಷ ಆಗುವುದರಲ್ಲಿ ಸಂಶಯವಿಲ್ಲ.






ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲ್ವೆ ನಂ. 06211 /06212), ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಮಂಗಳೂರು ಜಂಕ್ಷನ್ ವಿಶೇಷ ರೈಲು (ರೈಲ್ವೆ ನಂ. 06575/06576), ಯಶವಂತಪುರ - ಮಂಗಳೂರು (ರೈಲ್ವೆ ನಂ. 06539) ಹಾಗೂ ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್ಪ್ರೆಸ್ನಲ್ಲಿ (ರೈಲ್ವೆ ನಂ. 06540 ) ವಿಸ್ಟಾಡೋಮ್ ಬೋಗಿ ಸೇರ್ಪಡೆಯಾಗಲಿವೆ.
Rail passengers traveling between Bengaluru and Mangaluru during the day can now get a panoramic view of the picturesque ghats section as the train service will be inaugurated next week with bookings open.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm