ಬ್ರೇಕಿಂಗ್ ನ್ಯೂಸ್
03-07-21 04:57 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯನ್ನು ಮಂಗಳೂರು - ಬೆಂಗಳೂರು ನಡುವಿನ ರೈಲಿಗೆ ಜೋಡಿಸಲಾಗಿದ್ದು ಮುಂದಿನ ವಾರದಲ್ಲಿ ಸಂಚಾರಕ್ಕೆ ಲಭಿಸಲಿದೆ.
ಯಶವಂತಪುರ- ಮಂಗಳೂರು ವಿಶೇಷ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಜು.7ರಿಂದ ಸೇರ್ಪಡೆಗೊಳ್ಳಲಿದೆ. ಇದಕ್ಕಾಗಿ ಶನಿವಾರದಿಂದಲೇ (ಜು.3) ಬುಕಿಂಗ್ ಆರಂಭಿಸಲಾಗಿದೆ. ಈ ಬೋಗಿಯ ಪ್ರಯಾಣಕ್ಕೆ ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ.





ಪ್ರಕೃತಿ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟದ ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯ ಬದಲಿಗೆ ಎರಡು ವಿಸ್ಟಾಡೋಮ್ ಕೋಚ್ಗಳನ್ನು ಜೋಡಿಸಲಾಗುತ್ತಿದೆ. ಬೆಂಗಳೂರು- ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದ ವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮಂದಿ ಮನವಿ ಮಾಡಿದ್ದರು. ಅದರ ಪ್ರತಿಫಲದಿಂದ ವಿಸ್ಟಾಡೋಮ್ ರೈಲು ಸಂಚಾರ ಆರಂಭಿಸುತ್ತಿದೆ.
ರೈಲು ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗುವ ವೇಳೆ ಅಲ್ಲಿನ ಘಟ್ಟಗಳ ಸೌಂದರ್ಯವನ್ನು ರೈಲಿನೊಳಗೆ ಕುಳಿತೇ ಸವಿಯುವ ಅವಕಾಶ ಸಿಗಲಿದೆ. ಮಾರ್ಗ ಮಧ್ಯದಲ್ಲಿ ಬರುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು. ಮಳೆಗಾಲ ಆಗಿರುವುದರಿಂದ ಗಾಜಿನ ಬೋಗಿಯ ಪ್ರಯಾಣ ವಿಶೇಷ ಆಗುವುದರಲ್ಲಿ ಸಂಶಯವಿಲ್ಲ.






ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲ್ವೆ ನಂ. 06211 /06212), ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಮಂಗಳೂರು ಜಂಕ್ಷನ್ ವಿಶೇಷ ರೈಲು (ರೈಲ್ವೆ ನಂ. 06575/06576), ಯಶವಂತಪುರ - ಮಂಗಳೂರು (ರೈಲ್ವೆ ನಂ. 06539) ಹಾಗೂ ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್ಪ್ರೆಸ್ನಲ್ಲಿ (ರೈಲ್ವೆ ನಂ. 06540 ) ವಿಸ್ಟಾಡೋಮ್ ಬೋಗಿ ಸೇರ್ಪಡೆಯಾಗಲಿವೆ.
Rail passengers traveling between Bengaluru and Mangaluru during the day can now get a panoramic view of the picturesque ghats section as the train service will be inaugurated next week with bookings open.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm