ಬ್ರೇಕಿಂಗ್ ನ್ಯೂಸ್
04-07-21 04:08 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 4: ಮುಂದಿನ ಬಾರಿಯೂ ಎಚ್ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ ಎನ್ನಲಾಗುತ್ತಿದ್ದು ರಾಜಕೀಯ ವಲಯದಲ್ಲಿ ಮತ್ತೆ ಸದ್ದು ಮಾಡತೊಡಗಿದೆ.
ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿದ್ದರು. ಈ ವೇಳೆ, ಶರವಣ ರಾಜ್ಯ ರಾಜಕಾರಣದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಶರವಣ ಮನೆಗೆ ಬಂದಿದ್ದು ವಿನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವಿನಯ ಗುರೂಜಿ, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಅಧಿಕಾರ ನಡೆಸುತ್ತದೆ. ಮುಂದಿನ ಬಾರಿಯೂ ಮುಖ್ಯಮಂತ್ರಿಯಾಗುವ ಯೋಗ ಕುಮಾರಸ್ವಾಮಿ ಅವರಿಗೆ ಇದೆ ಎಂದು ತಿಳಿಸಿದ್ದಾರೆ.
ಗೌರಿಗದ್ದೆಯ ವಿನಯ್ ಗುರೂಜಿ ಭವಿಷ್ಯ ನಿಜವಾಗತ್ತದೆ ಎಂಬ ಮಾತು ರಾಜಕೀಯ ವಲಯದಲ್ಲಿದೆ. ಇದೇ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ವಿನಯ್ ಗುರೂಜಿ ಭಕ್ತರಾಗಿದ್ದು, ಅವರ ಆಶೀರ್ವಾದ ಪಡೆಯುತ್ತಲೇ ಇರುತ್ತಾರೆ.
ಚಿಕ್ಕ ವಯಸ್ಸಾದರೂ ವಿನಯ್ ಹೇಳುವ ಮಾತುಗಳೆಲ್ಲ ಸತ್ಯವಾಗಿದ್ದನ್ನು ತಿಳಿದು ಅನೇಕರು ಅವರ ಮಾತುಗಳನ್ನು ನಂಬತೊಡಗಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೆಗೌಡ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು ಕೂಡ ಅವರ ಮಾರ್ಗದರ್ಶನ ಪಡೆಯೋದನ್ನು ಆರಂಭಿಸಿದ್ದಾರೆ.
ಹಿಂದೆ ನುಡಿದ ಭವಿಷ್ಯವೂ ನಿಜವಾಗಿತ್ತು !
2018ರಲ್ಲಿ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಹಾಗೂ ಜೆಡಿಎಸ್ಗೆ 40ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದು ಚುನಾವಣೆ ಬಳಿಕ ನಿಜವಾಗಿತ್ತು. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದ ರಚನೆ ಆದ ಸಂದರ್ಭದಲ್ಲಿ ವಿನಯ್ ಗುರೂಜಿ ಅವರನ್ನು ಮನೆಗೆ ಕರೆಸಿಕೊಂಡು ದೇವೇಗೌಡ ಆಶೀರ್ವಾದ ಪಡೆದು ಸತ್ಕರಿಸಿದ್ದರು.
HD Kumaraswamy to be the next cm of Karnataka prophesizes Vinaya Guruji when HDK met him at his residence in Bangalore.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm