ಬ್ರೇಕಿಂಗ್ ನ್ಯೂಸ್
04-07-21 04:08 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 4: ಮುಂದಿನ ಬಾರಿಯೂ ಎಚ್ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ ಎನ್ನಲಾಗುತ್ತಿದ್ದು ರಾಜಕೀಯ ವಲಯದಲ್ಲಿ ಮತ್ತೆ ಸದ್ದು ಮಾಡತೊಡಗಿದೆ.
ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿದ್ದರು. ಈ ವೇಳೆ, ಶರವಣ ರಾಜ್ಯ ರಾಜಕಾರಣದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಶರವಣ ಮನೆಗೆ ಬಂದಿದ್ದು ವಿನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವಿನಯ ಗುರೂಜಿ, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಅಧಿಕಾರ ನಡೆಸುತ್ತದೆ. ಮುಂದಿನ ಬಾರಿಯೂ ಮುಖ್ಯಮಂತ್ರಿಯಾಗುವ ಯೋಗ ಕುಮಾರಸ್ವಾಮಿ ಅವರಿಗೆ ಇದೆ ಎಂದು ತಿಳಿಸಿದ್ದಾರೆ.
ಗೌರಿಗದ್ದೆಯ ವಿನಯ್ ಗುರೂಜಿ ಭವಿಷ್ಯ ನಿಜವಾಗತ್ತದೆ ಎಂಬ ಮಾತು ರಾಜಕೀಯ ವಲಯದಲ್ಲಿದೆ. ಇದೇ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ವಿನಯ್ ಗುರೂಜಿ ಭಕ್ತರಾಗಿದ್ದು, ಅವರ ಆಶೀರ್ವಾದ ಪಡೆಯುತ್ತಲೇ ಇರುತ್ತಾರೆ.
ಚಿಕ್ಕ ವಯಸ್ಸಾದರೂ ವಿನಯ್ ಹೇಳುವ ಮಾತುಗಳೆಲ್ಲ ಸತ್ಯವಾಗಿದ್ದನ್ನು ತಿಳಿದು ಅನೇಕರು ಅವರ ಮಾತುಗಳನ್ನು ನಂಬತೊಡಗಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೆಗೌಡ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು ಕೂಡ ಅವರ ಮಾರ್ಗದರ್ಶನ ಪಡೆಯೋದನ್ನು ಆರಂಭಿಸಿದ್ದಾರೆ.
ಹಿಂದೆ ನುಡಿದ ಭವಿಷ್ಯವೂ ನಿಜವಾಗಿತ್ತು !
2018ರಲ್ಲಿ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಹಾಗೂ ಜೆಡಿಎಸ್ಗೆ 40ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದು ಚುನಾವಣೆ ಬಳಿಕ ನಿಜವಾಗಿತ್ತು. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದ ರಚನೆ ಆದ ಸಂದರ್ಭದಲ್ಲಿ ವಿನಯ್ ಗುರೂಜಿ ಅವರನ್ನು ಮನೆಗೆ ಕರೆಸಿಕೊಂಡು ದೇವೇಗೌಡ ಆಶೀರ್ವಾದ ಪಡೆದು ಸತ್ಕರಿಸಿದ್ದರು.
HD Kumaraswamy to be the next cm of Karnataka prophesizes Vinaya Guruji when HDK met him at his residence in Bangalore.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm