ಬ್ರೇಕಿಂಗ್ ನ್ಯೂಸ್
05-07-21 12:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5: ತುಳು ಭಾಷೆ ಸ್ವಂತ ಲಿಪಿ ಇರುವ ಭಾಷೆ. ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಭಾಷೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಹದಿನೈದನೆಯ ಶತಮಾನದ ವರೆಗೆ ಸ್ವಂತ ಲಿಪಿಯನ್ನು ಹೊಂದಿದ್ದ ಭಾಷೆ ತುಳು. 19 ಲಕ್ಷಕ್ಕೂ ಅಧಿಕ ಮಂದಿಗೆ ತುಳು ಮಾತೃಭಾಷೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯವಹಾರದ ಭಾಷೆಯಾಗಿ ತುಳು ಬಳಸಲ್ಪಡುತ್ತದೆ' ಎಂದು ತಿಳಿಸಿದ್ದಾರೆ.
ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೆಯ ಪರಿಚ್ಛೇದಕ್ಕೆ ಸೇರಿಸುವುದು ತುಳು ಭಾಷೆಯ, ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಹಾಗೆಯೇ ಇದು ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. #TuluTo8thSchedule
— C T Ravi 🇮🇳 ಸಿ ಟಿ ರವಿ (@CTRavi_BJP) July 4, 2021
2/2
'ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆ ಹೊಂದಿರುವ ತುಳು ಭಾಷೆಯನ್ನು ಭಾರತದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಇದು ತುಳು ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಹಾಗೆಯೇ, ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ' ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ತುಳು ಭಾಷಿಗ ಹೊರತಾದ ಆಡಳಿತ ಪಕ್ಷದಲ್ಲಿರುವ ರಾಷ್ಟ್ರ ಮಟ್ಟದ ಮುಖಂಡರೊಬ್ಬರು, ತುಳು ಭಾಷೆ ಸಂವಿಧಾನದಡಿ ಸೇರ್ಪಡೆಯಾಗಬೇಕೆಂಬ ನೆಲೆಯಲ್ಲಿ ತುಳುವರು ನಡೆಸುತ್ತಿರುವ ಹಕ್ಕೊತ್ತಾಯದ ಧ್ವನಿಗೆ ಬೆಂಬಲ ಸಾರಿದ್ದಾರೆ.
Various organizations initiated a Twitter campaign demanding official language status to include Include Tulu in the Eighth Schedule CT Ravi supports initiative on Twitter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm