ಬ್ರೇಕಿಂಗ್ ನ್ಯೂಸ್
05-07-21 02:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 5: ರಾಜ್ಯ ಸರ್ಕಾರ ಘೋಷಿಸಿರುವ ಅನ್'ಲಾಕ್ 3.0 ಜಾರಿಗೊಂಡಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳು, ಪ್ರವಾಸಿ ತಾಣಗಳು ಓಪನ್ ಆಗಿವೆ. ಮಾಲ್, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿರುವ ಹಿನ್ನೆಲೆಯೆಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.
ಇನ್ನು ವ್ಯಾಪಾರ-ವಹಿವಾಟು ಇಲ್ಲದೆ ಕಂಗಾಲಾಗಿದ್ದ ವಾಣಿಜ್ಯ ಪ್ರದೇಶ, ಭಕ್ತರಿಲ್ಲದೆ ಭಣಗುಡುತ್ತಿದ್ದ ಧಾರ್ಮಿಕ ಕೇಂದ್ರಗಳಲ್ಲಿ ಮೊದಲಿನಂತೆ ಕಳೆ ಬರಲಿದೆ.

ಗ್ರಾಹಕರ ಸ್ವಾಗತಕ್ಕೆ ಬಹುತೇಕ ಕಡೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಮಾಲ್, ಚಿನ್ನಾಭರಣ, ಬೃಹತ್ ಬಟ್ಟೆ ಅಂಗಡಿಗಳ ಮುಂದೆ ಗ್ರಾಹಕರನ್ನು ಸ್ವಾಗತಿಸುವ ಫಲಕಗಳನ್ನು ಅಳವಡಿಸಿರುವುದು ಕಂಡು ಬಂದಿದೆ.
ಸರ್ಕಾರ ನಿರ್ಬಂಧಗಳನ್ನು ಹೇರಿದ್ದ ಹಿನ್ನೆಲೆಯಲ್ಲಿ ಇಷ್ಟು ದಿನ ಸಂಜೆ 5ರವರೆಗೆ ಮಾತ್ರ ಓಪನ್ ಇದ್ದ ಅಂಗಡಿಗಳು ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ವಹಿವಾಟು ನಡೆಸಲಿವೆ.

ಶೇ.100ರಷ್ಟು ಪ್ರಯಾಣಿಕರ ಸಂಚಾರ
ಸೋಮವಾರದಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಮಾತ್ರವಲ್ಲದೆ, ಆಟೋ, ಟ್ಯಾಕ್ಸಿ, ಖಾಸಗಿ ಸಾರಿಗೆ ವಾಹನಗಳು ಬೆಳಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಶೇ.100ರಷ್ಟುಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ನೀಡಲಾಗಿದೆ.


ಕರ್ಫ್ಯೂ ಸಡಿಲಗೊಳಿಸಿದ ಸರ್ಕಾರ
ವಾರಾಂತ್ಯ ಕಫ್ರ್ಯೂ ತೆರವುಗೊಳಿಸಿ, ರಾತ್ರಿ ಕಫ್ರ್ಯೂ ಅನ್ನು ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಿರುವುದರಿಂದ ಶನಿವಾರ, ಭಾನುವಾರವೂ ಸೇರಿ ವಾರದ 7 ದಿನ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ರಾತ್ರಿ 9 ಗಂಟೆವರೆಗೂ ನಡೆಸಬಹುದಾಗಿದೆ. ಹೋಂ ಡೆಲಿವರಿಗೆ 24 ಗಂಟೆಯೂ ಅವಕಾಶವಿದೆ. ಮದುವೆ ಸೇರಿದಂತೆ ಶುಭ-ಸಮಾರಂಭಗಳಿಗೆ 100 ಮಂದಿ, ಅಂತ್ಯಸಂಸ್ಕಾರಕ್ಕೆ 20 ಮಂದಿ ಭಾಗಿಯಾಗಬಹುದು.
ಸದ್ಯ ಧಾರ್ಮಿಕ, ಸಾಮಾಜಿಕ, ರಾಜಕೀಯ ಸಭೆ, ಸಮಾರಂಭಗಳು, ಪ್ರತಿಭಟನೆ ನಡೆಸಲು, ಪಬ್ಗಳ ಕಾರ್ಯಾಚರಣೆಗೆ ಇರುವ ನಿರ್ಬಂಧವನ್ನು ಮುಂದುವರೆಸಲಾಗಿದೆ. ಶಾಲಾ, ಕಾಲೇಜುಗಳ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾತ್ರಿ 8 ಗಂಟೆವರೆಗೆ ಮೆಟ್ರೋ ಸಂಚಾರಕ್ಕೆ ಅನುಮತಿ
ಉದ್ಯಾನನಗರಿ ಬೆಂಗಳೂರಿನಲ್ಲಿ ಇಷ್ಟುದಿನ ಸಂಜೆ 5ರವರೆಗೆ ಮಾತ್ರ ಸೀಮಿತ ಅವಧಿಯಲ್ಲಿ ಸಂಚರಿಸುತ್ತಿದ್ದ ಮೆಟ್ರೋ ರೈಲು ಸೋಮವಾರದಿಂದ ರಾತ್ರಿ 8 ಗಂಟೆಯವರೆಗೂ ಸಂಚರಿಸಲಿದೆ. ಜೊತೆಗೆ ಇಷ್ಟುದಿನ ಶೇ.50ರಷ್ಟುಪ್ರಯಾಣಿಕರ ನಿರ್ಬಂಧವನ್ನೂ ತೆರವುಗೊಳಿಸಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm