ಬ್ರೇಕಿಂಗ್ ನ್ಯೂಸ್
05-07-21 02:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 5: ರಾಜ್ಯ ಸರ್ಕಾರ ಘೋಷಿಸಿರುವ ಅನ್'ಲಾಕ್ 3.0 ಜಾರಿಗೊಂಡಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳು, ಪ್ರವಾಸಿ ತಾಣಗಳು ಓಪನ್ ಆಗಿವೆ. ಮಾಲ್, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿರುವ ಹಿನ್ನೆಲೆಯೆಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.
ಇನ್ನು ವ್ಯಾಪಾರ-ವಹಿವಾಟು ಇಲ್ಲದೆ ಕಂಗಾಲಾಗಿದ್ದ ವಾಣಿಜ್ಯ ಪ್ರದೇಶ, ಭಕ್ತರಿಲ್ಲದೆ ಭಣಗುಡುತ್ತಿದ್ದ ಧಾರ್ಮಿಕ ಕೇಂದ್ರಗಳಲ್ಲಿ ಮೊದಲಿನಂತೆ ಕಳೆ ಬರಲಿದೆ.
ಗ್ರಾಹಕರ ಸ್ವಾಗತಕ್ಕೆ ಬಹುತೇಕ ಕಡೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಮಾಲ್, ಚಿನ್ನಾಭರಣ, ಬೃಹತ್ ಬಟ್ಟೆ ಅಂಗಡಿಗಳ ಮುಂದೆ ಗ್ರಾಹಕರನ್ನು ಸ್ವಾಗತಿಸುವ ಫಲಕಗಳನ್ನು ಅಳವಡಿಸಿರುವುದು ಕಂಡು ಬಂದಿದೆ.
ಸರ್ಕಾರ ನಿರ್ಬಂಧಗಳನ್ನು ಹೇರಿದ್ದ ಹಿನ್ನೆಲೆಯಲ್ಲಿ ಇಷ್ಟು ದಿನ ಸಂಜೆ 5ರವರೆಗೆ ಮಾತ್ರ ಓಪನ್ ಇದ್ದ ಅಂಗಡಿಗಳು ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ವಹಿವಾಟು ನಡೆಸಲಿವೆ.
ಶೇ.100ರಷ್ಟು ಪ್ರಯಾಣಿಕರ ಸಂಚಾರ
ಸೋಮವಾರದಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಮಾತ್ರವಲ್ಲದೆ, ಆಟೋ, ಟ್ಯಾಕ್ಸಿ, ಖಾಸಗಿ ಸಾರಿಗೆ ವಾಹನಗಳು ಬೆಳಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಶೇ.100ರಷ್ಟುಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ನೀಡಲಾಗಿದೆ.
ಕರ್ಫ್ಯೂ ಸಡಿಲಗೊಳಿಸಿದ ಸರ್ಕಾರ
ವಾರಾಂತ್ಯ ಕಫ್ರ್ಯೂ ತೆರವುಗೊಳಿಸಿ, ರಾತ್ರಿ ಕಫ್ರ್ಯೂ ಅನ್ನು ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಿರುವುದರಿಂದ ಶನಿವಾರ, ಭಾನುವಾರವೂ ಸೇರಿ ವಾರದ 7 ದಿನ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ರಾತ್ರಿ 9 ಗಂಟೆವರೆಗೂ ನಡೆಸಬಹುದಾಗಿದೆ. ಹೋಂ ಡೆಲಿವರಿಗೆ 24 ಗಂಟೆಯೂ ಅವಕಾಶವಿದೆ. ಮದುವೆ ಸೇರಿದಂತೆ ಶುಭ-ಸಮಾರಂಭಗಳಿಗೆ 100 ಮಂದಿ, ಅಂತ್ಯಸಂಸ್ಕಾರಕ್ಕೆ 20 ಮಂದಿ ಭಾಗಿಯಾಗಬಹುದು.
ಸದ್ಯ ಧಾರ್ಮಿಕ, ಸಾಮಾಜಿಕ, ರಾಜಕೀಯ ಸಭೆ, ಸಮಾರಂಭಗಳು, ಪ್ರತಿಭಟನೆ ನಡೆಸಲು, ಪಬ್ಗಳ ಕಾರ್ಯಾಚರಣೆಗೆ ಇರುವ ನಿರ್ಬಂಧವನ್ನು ಮುಂದುವರೆಸಲಾಗಿದೆ. ಶಾಲಾ, ಕಾಲೇಜುಗಳ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ರಾತ್ರಿ 8 ಗಂಟೆವರೆಗೆ ಮೆಟ್ರೋ ಸಂಚಾರಕ್ಕೆ ಅನುಮತಿ
ಉದ್ಯಾನನಗರಿ ಬೆಂಗಳೂರಿನಲ್ಲಿ ಇಷ್ಟುದಿನ ಸಂಜೆ 5ರವರೆಗೆ ಮಾತ್ರ ಸೀಮಿತ ಅವಧಿಯಲ್ಲಿ ಸಂಚರಿಸುತ್ತಿದ್ದ ಮೆಟ್ರೋ ರೈಲು ಸೋಮವಾರದಿಂದ ರಾತ್ರಿ 8 ಗಂಟೆಯವರೆಗೂ ಸಂಚರಿಸಲಿದೆ. ಜೊತೆಗೆ ಇಷ್ಟುದಿನ ಶೇ.50ರಷ್ಟುಪ್ರಯಾಣಿಕರ ನಿರ್ಬಂಧವನ್ನೂ ತೆರವುಗೊಳಿಸಲಾಗಿದೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm