ಬ್ರೇಕಿಂಗ್ ನ್ಯೂಸ್
02-09-20 11:16 am Headline Karnataka News Network ಕರ್ನಾಟಕ
ಮಂಡ್ಯ, ಸೆಪ್ಟೆಂಬರ್.2: ಡ್ರಗ್ಸ್ ಮಾಫಿಯಾದಲ್ಲಿ ಬೆಂಗಳೂರು ಹಾಗೂ ಸ್ಯಾಂಡಲ್ವುಡ್ ಒಂದು ಕಡೆಯಾದ್ರೆ, ಗ್ರಾಮೀಣ ಭಾಗ ಇನ್ನೊಂದು ಕಡೆಯಾಗಿದ್ದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲೂ ಡ್ರಗ್ಸ್ ದೊರೆಯುತ್ತಿದೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.
ನಾಗಮಂಗಲದಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಶಿವರಾಮೇಗೌಡ,. ಗ್ರಾಮೀಣ ಭಾಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದ್ದು, ಯುವಕರು ಇದರಿಂದ ಹಾಳಾಗುತ್ತಿದ್ದಾರೆ. ಇದೆಲ್ಲವನ್ನು ಕಂಡರೂ ಕಾಣದಂತೆ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ . ನಾಗಮಂಗಲದಲ್ಲೂ ಡ್ರಗ್ಸ್ ಮಾರಾಟ ಜೋರಾಗಿ ನಡೆಯುತ್ತಿದೆ ಎಂದಿದ್ದಾರೆ.
ಈ ಹಿಂದೆ ಮಹಾನ್ ನಟರು ಇದ್ದ ಸ್ಯಾಂಡಲ್ವುಡ್ನಲ್ಲಿ ಈ ರೀತಿಯ ಚಟುವಟಿಕೆಗಳು ನಡೆದಿರೋದು ನಿಜಕ್ಕೂ ಬೇಸರದ ಸಂಗತಿ. ಬೆಂಗಳೂರಿನ ಕಲ್ಯಾಣ ನಗರದ ನನ್ನ ಶಾಲೆಯ ರಸ್ತೆಯಲ್ಲಿ ನೈಜೀರಿಯಾ, ಸೌಥ್ ಆಫ್ರಿಕಾ ಪ್ರಜೆಗಳು ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡ್ತಾ ಇದ್ದಾರೆ. ಈ ಬಗ್ಗೆ ಪೊಲೀಸರಿಗೆ ಹೇಳಿದ್ರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಈ ಡ್ರಗ್ಸ್ ದಂಧೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮಾತ್ರವಲ್ಲ ಕಳೆದ 20 ವರ್ಷಗಳಿಂದ ಈ ವ್ಯವಹಾರ ನಡೆಯುತ್ತಿದೆ. ಆದ್ರೆ ಇದೀಗ ಹಂತ ಹಂತವಾಗಿ ದೊಡ್ಡ ಪ್ರಮಾಣಕ್ಕೆ ಈ ದಂಧೆ ವ್ಯಾಪಿಸಿದೆ. ಡ್ರಗ್ಸ್ ದಂಧೆಕೋರರಿಗೆ ರಾಜಕಾರಣಿಗಳು ಹಾಗೂ ಪ್ರಭಾವಿಗಳ ಬೆಂಬಲದಿಂದ ಇಷ್ಟರ ಮಟ್ಟಿಗೆ ಈ ದಂಧೆ ವ್ಯಾಪಿಸಿದೆ. ಇದಲ್ಲದೇ ಗೋವಾ, ಶ್ರೀಲಂಕಾಗಳಿಗೆ ಕರೆದುಕೊಂಡು ಹೋಗಿ ಇಸ್ಪೀಟ್ ಆಟ ಆಡಿಸಲಾಗುತ್ತಿದೆ ಹಾಗೂ ತೋಟದ ಮನೆಗಳಲ್ಲಿ ರೇವ್ ಪಾರ್ಟಿಗಳು ನಡೆಯುತ್ತಿವೆ. ಇಂತಹ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮವಹಿಸಬೇಕಾಗಿದೆ ಎಂದು ಶಿವರಾಮೇಗೌಡ ಆಗ್ರಹಿಸಿದ್ದಾರೆ.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm