ಬ್ರೇಕಿಂಗ್ ನ್ಯೂಸ್
06-07-21 12:09 pm Headline Karnataka News Network ಕರ್ನಾಟಕ
Photo credits : Tv9 kannada
ಶಿವಮೊಗ್ಗ, ಜುಲೈ 06; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೊರೊನಾ ಲಸಿಕೆ ವಿಚಾರಕ್ಕೆ ನಡೆದ ಮಾತಿನ ಚಕಮಕಿ ಬಳಿಕ ಗಲಾಟೆ ನಡೆದಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಂಗ್ರೆಸ್ನ ಇಬ್ಬರು, ಬಿಜೆಪಿಯ ಮೂವರು ಮಾರಾಮಾರಿಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾರೆ. ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕೋವಿಡ್ ಲಸಿಕೆ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ. ಈ ಗದ್ದಲ ಬಳಿಕ ಹೊಡೆದಾಟಕ್ಕೆ ಕಾರಣವಾಗಿದ್ದು, ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ್ ಗಾಣಿಗ ಮತ್ತು ನಮೃತ್ ಗಾಯಗೊಂಡಿದ್ದಾರೆ.

ಈ ಘಟನೆ ಬಳಿಕ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದಾಗ ಮತ್ತೆ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಕಾಂಗ್ರೆಸ್ನ ಸುಭಾಷ್ ಕುಲಾಲ್, ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತಗೆ ಗಾಯಗಳಾಗಿವೆ.
ಕಿಮ್ಮನೆ ಪ್ರತಿಭಟನೆ; ಈ ಘಟನೆ ಬಳಿಕ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.
ಬಿಜೆಪಿ ಮುಖಂಡ ಸೊಪ್ಪುಗುಡ್ಡೆ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸಹ ಪ್ರತಿಭಟನೆ ನಡೆಸಿತು. ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕೋವಿಡ್ ಸಮಯದಲ್ಲಿ ಬಡವರಿಗೆ ಸಹಕಾರಿಯಾಗಲು ಕಾಂಗ್ರೆಸ್ ತೀರ್ಥಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಈ ಕಾರ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿವೆ. ಇಂತಹ ಸಮಯದಲ್ಲಿಯೇ ಮಾರಾಮಾರಿ ನಡೆದಿದೆ.
Thirthahalli Fight erupts between BJP and Congress members over Covid Vacinne many admitted to hospital. Also protest was held for the assault on BJP members by BJP party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm