ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.
ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm