ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.

ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm