ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.

ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm