ಬ್ರೇಕಿಂಗ್ ನ್ಯೂಸ್
06-07-21 01:28 pm Bangalore Correspondent ಕರ್ನಾಟಕ
Photo credits : Publictv
ಬೆಂಗಳೂರು, ಜುಲೈ 6 : ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಶರಣಾಗಿದ್ದ ಬನಶಂಕರಿಯ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಖದೀಮರನ್ನ ಶೂಟ್ ಮಾಡಿ ಬಂಧಿಸಿದ್ದಾರೆ.
ಮಹೇಶ್ ಮತ್ತು ನವೀನ್ ಗುಂಡೇಟು ತಿಂದ ಆರೋಪಿಗಳು. ಇವರು ಪಿಎಸ್ಐ ಚಂದನ್ ಕಾಳೆ, ಎಎಸ್ಐ ಲಕ್ಷ್ಮಣ್ ಚಾರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬಂಧಿತ ಆರೋಪಿಗಳು ಲಕ್ಕಸಂದ್ರ ನಿವಾಸಿಯಾಗಿದ್ದ ಫೈನಾನ್ಸಿಯರ್ ಮದನ್ನನ್ನು ಜುಲೈ 2 ರಂದು ಬನಶಂಕರಿ ದೇವಾಲಯ ಮುಂದೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದರು. ಕೃತ್ಯ ಎಸಗಿ ಮೂರು ದಿನಗಳ ಬಳಿಕ ವಕೀಲರ ವೇಷದಲ್ಲಿ ನಗರದ 37ನೇ ಎಸಿಎಂಎಂ ನ್ಯಾಯಾಲಯ ಮುಂದೆ ಶರಣಾಗಿದ್ದರು.

ಕೋವಿಡ್ ನಿಯಮ ಪ್ರಕಾರ ಕೋರ್ಟ್ ಪ್ರವೇಶಕ್ಕೆ ನಿಷೇಧ ಇರುವ ಹಿನ್ನೆಲೆ ಜಯನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಿನ್ನೆ ವಿಚಾರಣೆಗೆ ಒಳಪಡಿಸಿ ಇಂದು ತಲಘಟ್ಟಪುರದ ತುರಹಳ್ಳಿ ಅರಣ್ಯದ ಬಳಿ ಬಿಸಾಡಿದ್ದ ಮಾರಕಾಸ್ತ್ರ ಜಪ್ತಿಮಾಡಿಕೊಳ್ಳಲು ಮಹೇಶ್ ಹಾಗೂ ನವೀನ್ ನನ್ನು ಕರೆದೊಯ್ಯಲಾಗಿತ್ತು.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಸುದರ್ಶನ್ ಎಚ್ಚರಿಕೆ ಕೊಟ್ಟು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಪೊಲೀಸರ ಹಲ್ಲೆ ಮಾಡಲು ಮುಂದಾದಾಗ ಆರೋಪಿಗಳ ಬಲಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆಯಲಾಗಿದೆ.
Financier hacked to death in Banashankari in Bangalore accused shot on leg by police. The accused had come in the costume of lawyer to the Court.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm