ಬ್ರೇಕಿಂಗ್ ನ್ಯೂಸ್
10-07-21 10:47 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, ರಾಜ್ಯದಲ್ಲಿ ನೈಋತ್ಯ ಮುಂಗಾರು ಕ್ರಮೇಣವಾಗಿ ಚುರುಕುಪಡೆಯುತ್ತಿದೆ.


ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದೆ. ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪಣಂಬೂರಿನಲ್ಲಿ 15 ಸೆಂ.ಮೀ ಮಳೆ ಸುರಿದಿದೆ. ಮಂಗಳೂರು, ಭಟ್ಕಳ, ಶಿರಾಲಿ, ಧರ್ಮಸ್ಥಳ, ಹುಂಚದಕಟ್ಟೆ, ಕೋಟ, ಶಿನಿವಾಸಪುರ, ಕದ್ರ, ಕಾರ್ಕಳ, ಮಾಣಿ, ಕೊಲ್ಲೂರು, ಭರಮಸಾಗರ, ಬಾದಾಮಿ, ಮಂಕಿ, ಸಿದ್ದಾಪುರ, ಮೂಡುಬಿದಿರೆ, ಬೀದರ್, ತಾಳಗುಪ್ಪ, ಲಿಂಗನಮಕ್ಕಿ, ಶಿವಮೊಗ್ಗ, ಆಗುಂಬೆ, ಶೃಂಗೇರಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 10-14ರವರೆಗೆ ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.
The India Meteorological Department (IMD) issued red and orange alerts for Karnataka on Friday following widespread rainfall in Karnataka’s coastal regions.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm