ಬ್ರೇಕಿಂಗ್ ನ್ಯೂಸ್
10-07-21 10:47 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, ರಾಜ್ಯದಲ್ಲಿ ನೈಋತ್ಯ ಮುಂಗಾರು ಕ್ರಮೇಣವಾಗಿ ಚುರುಕುಪಡೆಯುತ್ತಿದೆ.


ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದೆ. ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪಣಂಬೂರಿನಲ್ಲಿ 15 ಸೆಂ.ಮೀ ಮಳೆ ಸುರಿದಿದೆ. ಮಂಗಳೂರು, ಭಟ್ಕಳ, ಶಿರಾಲಿ, ಧರ್ಮಸ್ಥಳ, ಹುಂಚದಕಟ್ಟೆ, ಕೋಟ, ಶಿನಿವಾಸಪುರ, ಕದ್ರ, ಕಾರ್ಕಳ, ಮಾಣಿ, ಕೊಲ್ಲೂರು, ಭರಮಸಾಗರ, ಬಾದಾಮಿ, ಮಂಕಿ, ಸಿದ್ದಾಪುರ, ಮೂಡುಬಿದಿರೆ, ಬೀದರ್, ತಾಳಗುಪ್ಪ, ಲಿಂಗನಮಕ್ಕಿ, ಶಿವಮೊಗ್ಗ, ಆಗುಂಬೆ, ಶೃಂಗೇರಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 10-14ರವರೆಗೆ ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.
The India Meteorological Department (IMD) issued red and orange alerts for Karnataka on Friday following widespread rainfall in Karnataka’s coastal regions.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm