ಬ್ರೇಕಿಂಗ್ ನ್ಯೂಸ್
02-09-20 09:50 pm Headline Karnataka News Network ಕರ್ನಾಟಕ
ಬೆಂಗಳೂರು,ಸೆಪ್ಟೆಂಬರ್ 02: ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದು ವಿಚಾರಣೆ ಮಾಡಿ ವಶಕ್ಕೆಪಡೆದು ಬಂಧಿಸಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಗೆಳೆಯರ ಮಧ್ಯೆ ನಡೆದಿತ್ತು ಗಲಾಟೆ:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ರಾಗಿಣಿ ಅವರ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್.ಟಿ.ಒ ಅಧಿಕಾರಿ ರವಿಶಂಕರ್ ಕಿತ್ತಾಡಿಕೊಂಡಿದ್ದರು. 2019ರ ಮಾರ್ಚ್ 16 ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಶಂಕರ್ ಜೊತೆ ಹೋಟೆಲ್ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು.

ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು. ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಅಂದು ನಾನು ಸ್ನೇಹಿತರ ಜೊತೆ ಹೋಟೆಲಿನಲ್ಲೇ ಇದ್ದೆ. ಹಳೆ ವೈಷ್ಯಮ್ಯಕ್ಕೆ ಸಂಬಂಧಿಸಿದಂತೆ ರವಿ ಹಾಗೂ ಶಿವಕುಮಾರ್ ಮಧ್ಯೆ ಗಲಾಟೆ ನಡೆದಿತ್ತು. ಆಗ ನಾನು ಸ್ನೇಹಿತರೊಂದಿಗೆ ಅಲ್ಲೇ ಊಟ ಮಾಡುತ್ತಿದ್ದೆ. ಅವರಿಬ್ಬರ ಜಗಳದ ಮಧ್ಯೆ ನನ್ನ ಪಾತ್ರ ಏನೂ ಇಲ್ಲ. ಗಲಾಟೆ ಆದ ಬಳಿಕ ನಾನು ಅಲ್ಲಿಂದ ಹೊರಟು ಹೋದೆ. ಈ ಘಟನೆ ಬಗ್ಗೆ ನಾನು ಪೋಲೀಸರಿಗೆ ಹೇಳಿಕೆ ನೀಡಿದ್ದೇನೆ ಅಷ್ಟೇ ಎಂದು ರಾಗಿಣಿ ಸ್ಪಷ್ಟಪಡಿಸಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm