ಬ್ರೇಕಿಂಗ್ ನ್ಯೂಸ್
02-09-20 09:50 pm Headline Karnataka News Network ಕರ್ನಾಟಕ
ಬೆಂಗಳೂರು,ಸೆಪ್ಟೆಂಬರ್ 02: ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದು ವಿಚಾರಣೆ ಮಾಡಿ ವಶಕ್ಕೆಪಡೆದು ಬಂಧಿಸಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಗೆಳೆಯರ ಮಧ್ಯೆ ನಡೆದಿತ್ತು ಗಲಾಟೆ:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ರಾಗಿಣಿ ಅವರ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್.ಟಿ.ಒ ಅಧಿಕಾರಿ ರವಿಶಂಕರ್ ಕಿತ್ತಾಡಿಕೊಂಡಿದ್ದರು. 2019ರ ಮಾರ್ಚ್ 16 ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಶಂಕರ್ ಜೊತೆ ಹೋಟೆಲ್ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು.

ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು. ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಅಂದು ನಾನು ಸ್ನೇಹಿತರ ಜೊತೆ ಹೋಟೆಲಿನಲ್ಲೇ ಇದ್ದೆ. ಹಳೆ ವೈಷ್ಯಮ್ಯಕ್ಕೆ ಸಂಬಂಧಿಸಿದಂತೆ ರವಿ ಹಾಗೂ ಶಿವಕುಮಾರ್ ಮಧ್ಯೆ ಗಲಾಟೆ ನಡೆದಿತ್ತು. ಆಗ ನಾನು ಸ್ನೇಹಿತರೊಂದಿಗೆ ಅಲ್ಲೇ ಊಟ ಮಾಡುತ್ತಿದ್ದೆ. ಅವರಿಬ್ಬರ ಜಗಳದ ಮಧ್ಯೆ ನನ್ನ ಪಾತ್ರ ಏನೂ ಇಲ್ಲ. ಗಲಾಟೆ ಆದ ಬಳಿಕ ನಾನು ಅಲ್ಲಿಂದ ಹೊರಟು ಹೋದೆ. ಈ ಘಟನೆ ಬಗ್ಗೆ ನಾನು ಪೋಲೀಸರಿಗೆ ಹೇಳಿಕೆ ನೀಡಿದ್ದೇನೆ ಅಷ್ಟೇ ಎಂದು ರಾಗಿಣಿ ಸ್ಪಷ್ಟಪಡಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm