ಬ್ರೇಕಿಂಗ್ ನ್ಯೂಸ್
02-09-20 09:50 pm Headline Karnataka News Network ಕರ್ನಾಟಕ
ಬೆಂಗಳೂರು,ಸೆಪ್ಟೆಂಬರ್ 02: ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದು ವಿಚಾರಣೆ ಮಾಡಿ ವಶಕ್ಕೆಪಡೆದು ಬಂಧಿಸಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಗೆಳೆಯರ ಮಧ್ಯೆ ನಡೆದಿತ್ತು ಗಲಾಟೆ:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ರಾಗಿಣಿ ಅವರ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್.ಟಿ.ಒ ಅಧಿಕಾರಿ ರವಿಶಂಕರ್ ಕಿತ್ತಾಡಿಕೊಂಡಿದ್ದರು. 2019ರ ಮಾರ್ಚ್ 16 ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಶಂಕರ್ ಜೊತೆ ಹೋಟೆಲ್ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು.

ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು. ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಅಂದು ನಾನು ಸ್ನೇಹಿತರ ಜೊತೆ ಹೋಟೆಲಿನಲ್ಲೇ ಇದ್ದೆ. ಹಳೆ ವೈಷ್ಯಮ್ಯಕ್ಕೆ ಸಂಬಂಧಿಸಿದಂತೆ ರವಿ ಹಾಗೂ ಶಿವಕುಮಾರ್ ಮಧ್ಯೆ ಗಲಾಟೆ ನಡೆದಿತ್ತು. ಆಗ ನಾನು ಸ್ನೇಹಿತರೊಂದಿಗೆ ಅಲ್ಲೇ ಊಟ ಮಾಡುತ್ತಿದ್ದೆ. ಅವರಿಬ್ಬರ ಜಗಳದ ಮಧ್ಯೆ ನನ್ನ ಪಾತ್ರ ಏನೂ ಇಲ್ಲ. ಗಲಾಟೆ ಆದ ಬಳಿಕ ನಾನು ಅಲ್ಲಿಂದ ಹೊರಟು ಹೋದೆ. ಈ ಘಟನೆ ಬಗ್ಗೆ ನಾನು ಪೋಲೀಸರಿಗೆ ಹೇಳಿಕೆ ನೀಡಿದ್ದೇನೆ ಅಷ್ಟೇ ಎಂದು ರಾಗಿಣಿ ಸ್ಪಷ್ಟಪಡಿಸಿದ್ದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm