ಬ್ರೇಕಿಂಗ್ ನ್ಯೂಸ್
13-07-21 12:23 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13 : ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳೀಕರಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪಿಣರಾಯಿ ವಿಜಯನ್ ಉತ್ತರ ನೀಡಿದ್ದು ಕಾಸರಗೋಡು ಜಿಲ್ಲೆಯ ಯಾವುದೇ ಹಳ್ಳಿಯ ಹೆಸರನ್ನು ಬದಲಾಯಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರನ್ನು ಮಲಯಾಳೀಕರಣ ಮಾಡುವ ಪ್ರಯತ್ನ ಮರುಕಳಿಸದಂತೆ ಅಲ್ಲಿನ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳಿಗೆ ತಾಕೀತು ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಪಿಣರಾಯಿ ವಿಜಯ್ ಅವರಿಗೆ ಪತ್ರವನ್ನು ಬರೆದು ಆಗ್ರಹಿಸಿದ್ದರು.
ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಮತ್ತು ಮಲಯಾಳಂ ಭಾಷಿಗರು ಸೌಹಾರ್ದದಿಂದ ಜೀವಿಸುತ್ತಿದ್ದಾರೆ. ಇಂತಹ ಪ್ರಯತ್ನಗಳು ಸೌಹಾರ್ದ ಕದಡುತ್ತವೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದರು. ಇದೀಗ ಈ ಪತ್ರಕ್ಕೆ ಪಿಣರಾಯಿ ವಿಜಯನ್ ಉತ್ತರ ನೀಡಿದ್ದಾರೆ.
ಕಾಸರಗೋಡು ಜಿಲ್ಲೆಯ ಯಾವುದೇ ಹಳ್ಳಿಯ ಹೆಸರನ್ನು ಬದಲಾಯಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಾಗಿಲ್ಲ. ನೀವು ವ್ಯಕ್ತಪಡಿಸಿದ ಭಾವನೆಗಳನ್ನು ನಾವು ಸಂಪೂರ್ಣವಾಗಿ ಪ್ರಶಂಸಿಸುತ್ತೇವೆ.
ಎರಡೂ ರಾಜ್ಯಗಳ ಜನರಲ್ಲಿ ಸಾಮರಸ್ಯ ಮತ್ತು ಬಾಂಧವ್ಯವನ್ನು ಬಲಪಡಿಸುವುದು ಅಗತ್ಯವಾಗಿದೆ. ಕೊರೊನಾ ಸಾಂಕ್ರಾಮಿಕದ ಪರಿಣಾಮ ನಮ್ಮ ರಾಜ್ಯದಲ್ಲಿ ಎಲ್ಲಾ ಶಾಲೆಗಳು ಮುಚ್ಚಲ್ಪಟ್ಟಿವೆ ಮತ್ತು ತರಗತಿಗಳನ್ನು ಆನ್ಲೈನ್ನಲ್ಲಿ ನಡೆಸಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಸ್ಥಳೀಯ ಕೇಬಲ್ ಚಾನೆಲ್ಗಳ ಮೂಲಕ ಕನ್ನಡ ಮಾಧ್ಯಮದಲ್ಲಿ ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Read: ಗಡಿಭಾಗದ ಕನ್ನಡದ ಹೆಸರಿಗೆ ಆಪತ್ತು ; ಕಾಸರಗೋಡಿನಲ್ಲಿ ಹೆಸರಿಗೂ ಬಂತು ಮಲಯಾಳೀಕರಣದ ಗಂಧ !
The issue of Kerala reportedly planning to rename some villages in the northern part of that state refuses to die down despite denials by the local authorities there. On Tuesday, Opposition leader Siddaramaiah wrote a letter to Kerala Chief Minister Pinarayi Vijayan urging his government not to change the names of places. In response to the letter the CM has stated that no such measures of changing the name has been initiated he said.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm