ಬ್ರೇಕಿಂಗ್ ನ್ಯೂಸ್
14-07-21 01:12 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 14: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರು, ಹಿಂದುಳಿದವರ ಪರ ಹೋರಾಟ ಮಾಡಿ ಮೇಲೆ ಬಂದ ದೊಡ್ಡ ಲೀಡರ್. ಅಂಥವರಿಗೆ ಗೌರವ ನೀಡುವುದು ನಮ್ಮ ಸಂಪ್ರದಾಯ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳುವ ಮೂಲಕ ರಾಜಕೀಯ ಅಚ್ಚರಿ ಮೂಡಿಸಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹಿರೇಹಳ್ಳಿ ಬಳಿ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಉತ್ತರ ಕರ್ನಾಟಕದವರು ಸಿಎಂ ಆಗುತ್ತಾರೆ ಎಂಬ ಸಚಿವ ಉಮೇಶ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಬಿ. ಶ್ರೀರಾಮುಲು, ಈ ಕುರಿತು ಉಮೇಶ್ ಅಣ್ಣ ಅವರನ್ನ ಕೇಳಿದರೆ ಸರಿ ಇರುತ್ತದೆ, ಈ ಕುರಿತು ನಾನು ಪ್ರತಿಕ್ರಿಯೆ ನೀಡುವುದು ಸರಿಯಲ್ಲ, ಉಮೇಶ್ ಕತ್ತಿ ನನ್ನ ದೋಸ್ತ್ ಇದ್ದಾನೆ, ಅವರಲ್ಲೇ ಕೇಳಿ ಎಂದು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರಂತೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಮುಲು, ಕಳೆದ ಚುನಾವಣೆಯಲ್ಲಿ ನಮ್ಮಂತಹ ವಾಲ್ಮೀಕಿ ಸಮುದಾಯಕ್ಕೆ ಎರಡು ಕ್ಷೇತ್ರ ಸ್ಪರ್ಧೆಗೆ ಅವಕಾಶ ಸಿಕ್ಕಿತು. ನೆಹರೂ, ಇಂದಿರಾ ಗಾಂಧಿ ಫ್ಯಾಮಿಲಿ ಎರಡು ಕಡೆ ಸ್ಪರ್ಧೆ ಮಾಡಿದ ವಿಷಯವನ್ನ ಕೇಳಿದ್ದೆ. ಸಿದ್ದರಾಮಯ್ಯರಂತಹ ದೊಡ್ಡವರು ಎರಡು ಕಡೆ ಸ್ಪರ್ಧೆ ಮಾಡಿದ್ದರು. ಆದರೆ, ಬಿಜೆಪಿಯ ಸಾಮಾನ್ಯ ಕಾರ್ಯಕರ್ತನೊಬ್ಬನಿಗೆ ಎರಡು ಕಡೆ ಸ್ಪರ್ಧೆಗೆ ಅವಕಾಶ ಸಿಕ್ಕಿತ್ತು. ಬಾದಾಮಿ ಜನರು ನನ್ನನ್ನು ಗೆಲ್ಲಿಸೋಕೆ ಬಹಳ ಪ್ರಯತ್ನಿಸಿದರು. ಆದರೆ ಸ್ಪಲ್ಪದರಲ್ಲೇ ಸೋಲಾಯ್ತು. ಚುನಾವಣೆ ಸಂದರ್ಭಗಳಲ್ಲಿ ಜನರು ಹಣೆಬರಹ ಬರೆಯುತ್ತಾರೆ ಎಂದು ಹೇಳಿದರು.
ಆದರೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಖಾರ ಉತ್ತರ ನೀಡುತ್ತಿದ್ದ ಕಾಲೆಳೆದು ಪ್ರತಿಕ್ರಿಯೆ ನೀಡುತ್ತಿದ್ದ ಸಚಿವ ಬಿ. ಶ್ರೀರಾಮುಲು ಈ ಬಾರಿ ಮಾತ್ರ ಸ್ವಲ್ಪ ಮೆತ್ತಗಾಗಿದ್ದಾರೆ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ಸಾಫ್ಟ್ ಕಾರ್ನರ್ ತೋರುತ್ತಿದ್ದಾರೆ ಅನ್ನೋದು ಅವರ ಹೇಳಿಕೆಗಳಿಂದಲೇ ಕಂಡುಬರುತ್ತಿದೆ.
ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಇಬ್ಬರೂ ಹಿಂದುಳಿದ ಸಮುದಾಯದವರು, ಸಿದ್ದರಾಮಯ್ಯ ಅನೇಕ ವರ್ಷಗಳ ಕಾಲ ಹೋರಾಟ ಮಾಡಿಕೊಂಡು ಬಂದ ದೊಡ್ಡ ನಾಯಕ. ಸಿದ್ದರಾಮಯ್ಯ ಸೀನಿಯರ್ ಲೀಡರ್, ಬಡವರ ಪರ, ಹಿಂದುಳಿದವರ ಪರ ಇರುವವರು. ಅಂಥವರಿಗೆ ನಾನು ಗೌರವ ನೀಡುತ್ತೇನೆ. ನಮ್ಮ ಸಂಪ್ರದಾಯ, ರಾಜಕೀಯ, ಪಕ್ಷದ ಸಿದ್ದಾಂತಗಳು ಬೇರೆ. ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರನ್ನ ವಿರೋಧಿಸುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಗ್ಗೆ ಮೆತ್ತಗಿನ ಪ್ರತಿಕ್ರಿಯೆಯನ್ನು ಶ್ರೀರಾಮುಲು ನೀಡಿರುವುದು ಅಚ್ಚರಿ ಮೂಡಿಸಿದೆ.
Minister B Sriramulu says he respects Siddaramaiah for his Personality.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm