ಬ್ರೇಕಿಂಗ್ ನ್ಯೂಸ್
14-07-21 05:10 pm Headline Karnataka News Network ಕರ್ನಾಟಕ
ಮೈಸೂರು, ಜುಲೈ 14: ಲಾಕ್ಡೌನ್ ತೆರವಾದ ಬಳಿಕ ರಾಜ್ಯದಲ್ಲಿ ಶೇ 15ರಿಂದ 20ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇವುಗಳಲ್ಲಿ ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳೂ ಸೇರಿವೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಂಥೆಟಿಕ್ ಸ್ವರೂಪದ ಮಾದಕ ವಸ್ತು ಸಣ್ಣ ಪೇಪರಿನ ರೂಪದಲ್ಲಿ ಅಂಚೆಯ ಮೂಲಕ ರವಾನೆಯಾಗುತ್ತಿವೆ. ಈ ಕುರಿತ ಮಾಹಿತಿಗಳು ‘ಡಾರ್ಕ್ವೆಬ್’ನಲ್ಲಿ ವಿನಿಮಯವಾಗುತ್ತಿವೆ. ಕರ್ನಾಟಕ ಪೊಲೀಸರು ಡಾರ್ಕ್ವೆಬ್ನ್ನು ನಿಯಮಿತವಾಗಿ ಮೊದಲ ಬಾರಿಗೆ ಬೇಧಿಸಿ ಮಾಹಿತಿ ಪಡೆದು, ದಾಳಿಗಳನ್ನು ನಡೆಸುತ್ತಿದ್ದಾರೆ’ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಮಾದಕ ವಸ್ತು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ವರ್ಷದಲ್ಲಿ 15ರಿಂದ 20 ಮಂದಿ ವಿದೇಶಿಯರನ್ನು ಬಂಧಿಸಲಾಗಿದೆ. ‘ಎನ್ಡಿಪಿಎಸ್’ ಕಾನೂನಿನ ನಿಯಮಗಳಿಗೆ ತಿದ್ದುಪಡಿ ತಂದು, ಬಂಧಿತರಿಗೆ ಕನಿಷ್ಠ 1 ವರ್ಷಗಳ ಕಾಲ ಅಥವಾ ತನಿಖೆ ಪೂರ್ಣಗೊಳ್ಳುವವರೆಗೂ ಜಾಮೀನು ಸಿಗದಂತೆ ಮಾಡುವ ಪ್ರಸ್ತಾವ ಇದೆ. ದೇಶದಲ್ಲೇ ಹೆಚ್ಚು ಮಾದಕವಸ್ತುಗಳನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ತಿಳಿಸಿದರು.
ಸೈಬರ್ ಅಪರಾಧ ಪ್ರಕರಣಗಳನ್ನು ಬೇಧಿಸಲು ಬೆಂಗಳೂರಿನ ಪೊಲೀಸರು ‘ಆ್ಯಪ್’ ರೂಪಿಸಿದ್ದಾರೆ. ‘ಎಫ್ಐಆರ್’ ದಾಖಲಾಗುವುದಕ್ಕೂ ಮುನ್ನವೇ ಹಣ ವರ್ಗಾವಣೆಯಾಗುವ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡು, ಒಂದು ತಿಂಗಳಿನಲ್ಲಿ ₹40 ಕೋಟಿಯಷ್ಟು ಹಣವು ವಂಚಕರ ಕೈಗೆ ಸಿಗದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ವ್ಯವಸ್ಥೆ ಮೈಸೂರಿನಲ್ಲಿಯೂ ರೂಪಿಸಬೇಕು’ ಎಂದರು.

ಸಂಚಾರ ನಿಯಮ ಉಲ್ಲಂಘನೆಯಿಂದ ಸಂಗ್ರಹವಾದ ಹಣವನ್ನು ರಸ್ತೆ ಸುರಕ್ಷತೆಗೆ ಹಾಗೂ ಅಭಿವೃದ್ಧಿಗೆ ಬಳಕೆ ಮಾಡಲು ನೇರವಾಗಿ ಪೊಲೀಸ್ ಇಲಾಖೆಗೆ ನೀಡಬೇಕು’ ಎಂದು ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.
ಕಾಲೇಜುಗಳು ಆರಂಭವಾದ ಬಳಿಕ ವಿದ್ಯಾರ್ಥಿನಿಯರಿಗೆ ಮಾನಸಿಕ, ದೈಹಿಕ ಸದೃಢತೆ ಕಾಪಾಡಿಕೊಳ್ಳಲು ತರಬೇತಿ ನೀಡಲಾಗುವುದು. ಪೊಲೀಸರ ತರಬೇತಿಗಾಗಿ ‘ನ್ಯಾಷನಲ್ ಡಿಫೆನ್ಸ್ ಅಕಾಡೆಮಿ’ ಮಾದರಿಯಲ್ಲಿ ‘ಆಫಿಸರ್ಸ್ ಟ್ರೈನಿಂಗ್ ಅಕಾಡೆಮಿ’ ಸ್ಥಾಪಿಸಲಾಗುವುದು. ಪೊಲೀಸ್ ತರಬೇತಿಯ ಪಠ್ಯಕ್ರಮ ಬದಲಾವಣೆಗೆ ಸಮಿತಿ ರಚಿಸಲಾಗುವುದು’ ಎಂದು ತಿಳಿಸಿದರು.
Crime rates increased by 15 to 20 percent after lockdown opened says Home Minister Basavaraj Bommai during a review meeting held in Mysore.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm