ಬ್ರೇಕಿಂಗ್ ನ್ಯೂಸ್
03-09-20 10:10 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಹಿರಿಯ ಐಪಿಎಸ್ ಅಧಿಕಾರಿ, ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿ ಆಗಿರುವ ಆರ್.ಪಿ ಶರ್ಮಾ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದಿದ್ದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರನ್ನು ದಾಖಲು ಮಾಡಲಾಗಿದೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ಶರ್ಮಾ ಇದ್ದ ವೇಳೆ, ಅವರಿಗೆ ಗುಂಡು ತಗುಲಿದೆ. ಸಂಜೆ ವೇಳೆಗೆ ಮನೆಯಿಂದ ಗುಂಡಿನ ಶಬ್ದ ಕೇಳಿಬಂದಿದ್ದು ಸಹಾಯಕ ಸಿಬಂದಿ ತೆರಳಿ ನೋಡಿದಾಗ ಶರ್ಮಾ ರಕ್ತದಿಂದ ತೋಯ್ದು ಹೋಗಿದ್ದರು. ಕೂಡಲೇ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗ್ತಿದೆ.
ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ
ಆರ್ ಪಿ ಶರ್ಮ ಅವರಿಗೆ ಗುಂಡೇಟು ತಗುಲಿದ ಪ್ರಕರಣದಲ್ಲಿ ಸಿಎಂ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಶರ್ಮಾ ಅವರು ತಮ್ಮ ಪಿಸ್ತೂಲ್ ಸ್ವಚ್ಛಗೊಳಿಸುತ್ತಿದ್ದಾಗ ಮಿಸ್ ಫೈರ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಐಪಿಎಸ್ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸದ್ಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶರ್ಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್. ಪಿ. ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಹೀಗಾಗಿ ಮಿಸ್ ಫೈರ್ ಆಗಿದೆಯೋ, ಸುಸೈಡ್ ಎಟಂಪ್ಟ್ ಆಗಿತ್ತೇ ಅಥವಾ ಘಟನೆಯಲ್ಲಿ ಇನ್ಯಾರದ್ದೇ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆಯೂ ತನಿಖೆ ನಡೆಯಲಿದೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm