ಬ್ರೇಕಿಂಗ್ ನ್ಯೂಸ್
03-09-20 10:10 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಹಿರಿಯ ಐಪಿಎಸ್ ಅಧಿಕಾರಿ, ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿ ಆಗಿರುವ ಆರ್.ಪಿ ಶರ್ಮಾ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದಿದ್ದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರನ್ನು ದಾಖಲು ಮಾಡಲಾಗಿದೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ಶರ್ಮಾ ಇದ್ದ ವೇಳೆ, ಅವರಿಗೆ ಗುಂಡು ತಗುಲಿದೆ. ಸಂಜೆ ವೇಳೆಗೆ ಮನೆಯಿಂದ ಗುಂಡಿನ ಶಬ್ದ ಕೇಳಿಬಂದಿದ್ದು ಸಹಾಯಕ ಸಿಬಂದಿ ತೆರಳಿ ನೋಡಿದಾಗ ಶರ್ಮಾ ರಕ್ತದಿಂದ ತೋಯ್ದು ಹೋಗಿದ್ದರು. ಕೂಡಲೇ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗ್ತಿದೆ.
ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ
ಆರ್ ಪಿ ಶರ್ಮ ಅವರಿಗೆ ಗುಂಡೇಟು ತಗುಲಿದ ಪ್ರಕರಣದಲ್ಲಿ ಸಿಎಂ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಶರ್ಮಾ ಅವರು ತಮ್ಮ ಪಿಸ್ತೂಲ್ ಸ್ವಚ್ಛಗೊಳಿಸುತ್ತಿದ್ದಾಗ ಮಿಸ್ ಫೈರ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಐಪಿಎಸ್ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸದ್ಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶರ್ಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್. ಪಿ. ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಹೀಗಾಗಿ ಮಿಸ್ ಫೈರ್ ಆಗಿದೆಯೋ, ಸುಸೈಡ್ ಎಟಂಪ್ಟ್ ಆಗಿತ್ತೇ ಅಥವಾ ಘಟನೆಯಲ್ಲಿ ಇನ್ಯಾರದ್ದೇ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆಯೂ ತನಿಖೆ ನಡೆಯಲಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm