ಬ್ರೇಕಿಂಗ್ ನ್ಯೂಸ್
03-09-20 10:10 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಹಿರಿಯ ಐಪಿಎಸ್ ಅಧಿಕಾರಿ, ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿ ಆಗಿರುವ ಆರ್.ಪಿ ಶರ್ಮಾ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದಿದ್ದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರನ್ನು ದಾಖಲು ಮಾಡಲಾಗಿದೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ಶರ್ಮಾ ಇದ್ದ ವೇಳೆ, ಅವರಿಗೆ ಗುಂಡು ತಗುಲಿದೆ. ಸಂಜೆ ವೇಳೆಗೆ ಮನೆಯಿಂದ ಗುಂಡಿನ ಶಬ್ದ ಕೇಳಿಬಂದಿದ್ದು ಸಹಾಯಕ ಸಿಬಂದಿ ತೆರಳಿ ನೋಡಿದಾಗ ಶರ್ಮಾ ರಕ್ತದಿಂದ ತೋಯ್ದು ಹೋಗಿದ್ದರು. ಕೂಡಲೇ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗ್ತಿದೆ.
ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ
ಆರ್ ಪಿ ಶರ್ಮ ಅವರಿಗೆ ಗುಂಡೇಟು ತಗುಲಿದ ಪ್ರಕರಣದಲ್ಲಿ ಸಿಎಂ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಶರ್ಮಾ ಅವರು ತಮ್ಮ ಪಿಸ್ತೂಲ್ ಸ್ವಚ್ಛಗೊಳಿಸುತ್ತಿದ್ದಾಗ ಮಿಸ್ ಫೈರ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಐಪಿಎಸ್ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸದ್ಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶರ್ಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್. ಪಿ. ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಹೀಗಾಗಿ ಮಿಸ್ ಫೈರ್ ಆಗಿದೆಯೋ, ಸುಸೈಡ್ ಎಟಂಪ್ಟ್ ಆಗಿತ್ತೇ ಅಥವಾ ಘಟನೆಯಲ್ಲಿ ಇನ್ಯಾರದ್ದೇ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆಯೂ ತನಿಖೆ ನಡೆಯಲಿದೆ.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm