ಬ್ರೇಕಿಂಗ್ ನ್ಯೂಸ್
03-09-20 10:10 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಹಿರಿಯ ಐಪಿಎಸ್ ಅಧಿಕಾರಿ, ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿ ಆಗಿರುವ ಆರ್.ಪಿ ಶರ್ಮಾ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದಿದ್ದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರನ್ನು ದಾಖಲು ಮಾಡಲಾಗಿದೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ಶರ್ಮಾ ಇದ್ದ ವೇಳೆ, ಅವರಿಗೆ ಗುಂಡು ತಗುಲಿದೆ. ಸಂಜೆ ವೇಳೆಗೆ ಮನೆಯಿಂದ ಗುಂಡಿನ ಶಬ್ದ ಕೇಳಿಬಂದಿದ್ದು ಸಹಾಯಕ ಸಿಬಂದಿ ತೆರಳಿ ನೋಡಿದಾಗ ಶರ್ಮಾ ರಕ್ತದಿಂದ ತೋಯ್ದು ಹೋಗಿದ್ದರು. ಕೂಡಲೇ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗ್ತಿದೆ.
ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ
ಆರ್ ಪಿ ಶರ್ಮ ಅವರಿಗೆ ಗುಂಡೇಟು ತಗುಲಿದ ಪ್ರಕರಣದಲ್ಲಿ ಸಿಎಂ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಶರ್ಮಾ ಅವರು ತಮ್ಮ ಪಿಸ್ತೂಲ್ ಸ್ವಚ್ಛಗೊಳಿಸುತ್ತಿದ್ದಾಗ ಮಿಸ್ ಫೈರ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಐಪಿಎಸ್ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸದ್ಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶರ್ಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್. ಪಿ. ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಹೀಗಾಗಿ ಮಿಸ್ ಫೈರ್ ಆಗಿದೆಯೋ, ಸುಸೈಡ್ ಎಟಂಪ್ಟ್ ಆಗಿತ್ತೇ ಅಥವಾ ಘಟನೆಯಲ್ಲಿ ಇನ್ಯಾರದ್ದೇ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆಯೂ ತನಿಖೆ ನಡೆಯಲಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm