ಬ್ರೇಕಿಂಗ್ ನ್ಯೂಸ್
03-09-20 10:10 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಹಿರಿಯ ಐಪಿಎಸ್ ಅಧಿಕಾರಿ, ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿ ಆಗಿರುವ ಆರ್.ಪಿ ಶರ್ಮಾ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದಿದ್ದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರನ್ನು ದಾಖಲು ಮಾಡಲಾಗಿದೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ಶರ್ಮಾ ಇದ್ದ ವೇಳೆ, ಅವರಿಗೆ ಗುಂಡು ತಗುಲಿದೆ. ಸಂಜೆ ವೇಳೆಗೆ ಮನೆಯಿಂದ ಗುಂಡಿನ ಶಬ್ದ ಕೇಳಿಬಂದಿದ್ದು ಸಹಾಯಕ ಸಿಬಂದಿ ತೆರಳಿ ನೋಡಿದಾಗ ಶರ್ಮಾ ರಕ್ತದಿಂದ ತೋಯ್ದು ಹೋಗಿದ್ದರು. ಕೂಡಲೇ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗ್ತಿದೆ.
ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ
ಆರ್ ಪಿ ಶರ್ಮ ಅವರಿಗೆ ಗುಂಡೇಟು ತಗುಲಿದ ಪ್ರಕರಣದಲ್ಲಿ ಸಿಎಂ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಶರ್ಮಾ ಅವರು ತಮ್ಮ ಪಿಸ್ತೂಲ್ ಸ್ವಚ್ಛಗೊಳಿಸುತ್ತಿದ್ದಾಗ ಮಿಸ್ ಫೈರ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಐಪಿಎಸ್ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸದ್ಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶರ್ಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್. ಪಿ. ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಹೀಗಾಗಿ ಮಿಸ್ ಫೈರ್ ಆಗಿದೆಯೋ, ಸುಸೈಡ್ ಎಟಂಪ್ಟ್ ಆಗಿತ್ತೇ ಅಥವಾ ಘಟನೆಯಲ್ಲಿ ಇನ್ಯಾರದ್ದೇ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆಯೂ ತನಿಖೆ ನಡೆಯಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm