ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm