ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm