ಬ್ರೇಕಿಂಗ್ ನ್ಯೂಸ್
15-07-21 04:57 pm Headline Karnataka News Network ಕರ್ನಾಟಕ
ಕಲಬುರಗಿ, ಜುಲೈ 15 : ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರಾಜ್ಯ ಕಂಡ ಮಹಾನ್ ಮೋಸಗಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಕಟುವಾಗಿ ನಿಂದಿಸಿದ್ದಾರೆ.
ನಗರದ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಮುನ್ನ ದೊಡ್ಡ ಮಟ್ಟದಲ್ಲಿ ಅಹಿಂದ ಹೋರಾಟ ಮಾಡಿದರು. ಸಿಎಂ ಆದ ನಂತರ ಅಹಿಂದವನ್ನೇ ಕೈಬಿಟ್ಟರು. ಮತ್ತೆ ಇದೀಗ ಸಿಎಂ ಆಗಲು ಅಹಿಂದ ಮಂತ್ರ ಪಠಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯರನ್ನು ಜನ ಓಡಿಸಿದ್ರು. ಈಗ ಬಾದಾಮಿ ಕ್ಷೇತ್ರದಿಂದಲೂ ಓಡಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮತ್ತೆ ಮೈಸೂರಿನತ್ತ ಮುಖ ಮಾಡಲು ಸಜ್ಜಾಗಿದ್ದಾರೆ ಎಂದರು.

ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಕುರ್ಚಿ ಆಟ ನಡೆಯುತ್ತಿದೆ. ಗುಂಪುಗಾರಿಕೆ ಜೋರಾಗಿದೆ. ಸಿಎಂ ಕುರ್ಚಿ ಏರಲು ಹಲವರು ಈಗಾಗಲೇ ಟವೆಲ್ ಹಾಕಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಿದ್ದಾರೆ. ಮತ್ತೊಂದೆಡೆ ಡಿಕೆಶಿ ಸಿಎಂ ಆಗಬೇಕು ಅಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಷಯ ಜೋರಾಗಿ ಕೇಳಿ ಬರ್ತಿದೆ. ಆದರೆ, ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತಂತೆ ಯಾವುದೇ ಗೊಂದಲಗಳಿಲ್ಲ ಎಂದು ಕಟೀಲು ಸ್ಪಷ್ಟನೆ ನೀಡಿದ್ರು.
ಇದೇ ವೇಳೆ ಸಿಎಂ ಬೆಂಬಲಿಗ ಶಾಸಕರು ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಶಾಸಕರು ದೆಹಲಿ ಸೇರಿದಂತೆ ಎಲ್ಲೆಡೆ ಹೋಗುವ ಅವಕಾಶವಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಯಾವುದೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಸಮಸ್ಯೆಯಿಲ್ಲ. ಈ ಹಿಂದೆ ಎರಡು ಲಸಿಕೆ ಉತ್ಪಾದನೆ ಕೇಂದ್ರಗಳಿದ್ದವು. ಆದರೆ ಈಗ ದೇಶದಲ್ಲಿ ಐದು ಲಸಿಕೆ ಉತ್ಪಾದನಾ ಕೇಂದ್ರಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ತಿಳಿಸಿದ್ದಾರೆ.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm