ಬ್ರೇಕಿಂಗ್ ನ್ಯೂಸ್
15-07-21 04:57 pm Headline Karnataka News Network ಕರ್ನಾಟಕ
ಕಲಬುರಗಿ, ಜುಲೈ 15 : ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರಾಜ್ಯ ಕಂಡ ಮಹಾನ್ ಮೋಸಗಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಕಟುವಾಗಿ ನಿಂದಿಸಿದ್ದಾರೆ.
ನಗರದ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಮುನ್ನ ದೊಡ್ಡ ಮಟ್ಟದಲ್ಲಿ ಅಹಿಂದ ಹೋರಾಟ ಮಾಡಿದರು. ಸಿಎಂ ಆದ ನಂತರ ಅಹಿಂದವನ್ನೇ ಕೈಬಿಟ್ಟರು. ಮತ್ತೆ ಇದೀಗ ಸಿಎಂ ಆಗಲು ಅಹಿಂದ ಮಂತ್ರ ಪಠಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯರನ್ನು ಜನ ಓಡಿಸಿದ್ರು. ಈಗ ಬಾದಾಮಿ ಕ್ಷೇತ್ರದಿಂದಲೂ ಓಡಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮತ್ತೆ ಮೈಸೂರಿನತ್ತ ಮುಖ ಮಾಡಲು ಸಜ್ಜಾಗಿದ್ದಾರೆ ಎಂದರು.

ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಕುರ್ಚಿ ಆಟ ನಡೆಯುತ್ತಿದೆ. ಗುಂಪುಗಾರಿಕೆ ಜೋರಾಗಿದೆ. ಸಿಎಂ ಕುರ್ಚಿ ಏರಲು ಹಲವರು ಈಗಾಗಲೇ ಟವೆಲ್ ಹಾಕಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಿದ್ದಾರೆ. ಮತ್ತೊಂದೆಡೆ ಡಿಕೆಶಿ ಸಿಎಂ ಆಗಬೇಕು ಅಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಷಯ ಜೋರಾಗಿ ಕೇಳಿ ಬರ್ತಿದೆ. ಆದರೆ, ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತಂತೆ ಯಾವುದೇ ಗೊಂದಲಗಳಿಲ್ಲ ಎಂದು ಕಟೀಲು ಸ್ಪಷ್ಟನೆ ನೀಡಿದ್ರು.
ಇದೇ ವೇಳೆ ಸಿಎಂ ಬೆಂಬಲಿಗ ಶಾಸಕರು ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಶಾಸಕರು ದೆಹಲಿ ಸೇರಿದಂತೆ ಎಲ್ಲೆಡೆ ಹೋಗುವ ಅವಕಾಶವಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಯಾವುದೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಸಮಸ್ಯೆಯಿಲ್ಲ. ಈ ಹಿಂದೆ ಎರಡು ಲಸಿಕೆ ಉತ್ಪಾದನೆ ಕೇಂದ್ರಗಳಿದ್ದವು. ಆದರೆ ಈಗ ದೇಶದಲ್ಲಿ ಐದು ಲಸಿಕೆ ಉತ್ಪಾದನಾ ಕೇಂದ್ರಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ತಿಳಿಸಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm