ಬ್ರೇಕಿಂಗ್ ನ್ಯೂಸ್
15-07-21 04:57 pm Headline Karnataka News Network ಕರ್ನಾಟಕ
ಕಲಬುರಗಿ, ಜುಲೈ 15 : ಮಾಜಿ ಮುಖ್ಯಮಂತ್ರಿಯೂ ಆಗಿರುವ ಹಾಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ರಾಜ್ಯ ಕಂಡ ಮಹಾನ್ ಮೋಸಗಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಕಟುವಾಗಿ ನಿಂದಿಸಿದ್ದಾರೆ.
ನಗರದ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗುವ ಮುನ್ನ ದೊಡ್ಡ ಮಟ್ಟದಲ್ಲಿ ಅಹಿಂದ ಹೋರಾಟ ಮಾಡಿದರು. ಸಿಎಂ ಆದ ನಂತರ ಅಹಿಂದವನ್ನೇ ಕೈಬಿಟ್ಟರು. ಮತ್ತೆ ಇದೀಗ ಸಿಎಂ ಆಗಲು ಅಹಿಂದ ಮಂತ್ರ ಪಠಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯರನ್ನು ಜನ ಓಡಿಸಿದ್ರು. ಈಗ ಬಾದಾಮಿ ಕ್ಷೇತ್ರದಿಂದಲೂ ಓಡಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮತ್ತೆ ಮೈಸೂರಿನತ್ತ ಮುಖ ಮಾಡಲು ಸಜ್ಜಾಗಿದ್ದಾರೆ ಎಂದರು.

ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಕುರ್ಚಿ ಆಟ ನಡೆಯುತ್ತಿದೆ. ಗುಂಪುಗಾರಿಕೆ ಜೋರಾಗಿದೆ. ಸಿಎಂ ಕುರ್ಚಿ ಏರಲು ಹಲವರು ಈಗಾಗಲೇ ಟವೆಲ್ ಹಾಕಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಿದ್ದಾರೆ. ಮತ್ತೊಂದೆಡೆ ಡಿಕೆಶಿ ಸಿಎಂ ಆಗಬೇಕು ಅಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಷಯ ಜೋರಾಗಿ ಕೇಳಿ ಬರ್ತಿದೆ. ಆದರೆ, ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತಂತೆ ಯಾವುದೇ ಗೊಂದಲಗಳಿಲ್ಲ ಎಂದು ಕಟೀಲು ಸ್ಪಷ್ಟನೆ ನೀಡಿದ್ರು.
ಇದೇ ವೇಳೆ ಸಿಎಂ ಬೆಂಬಲಿಗ ಶಾಸಕರು ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಶಾಸಕರು ದೆಹಲಿ ಸೇರಿದಂತೆ ಎಲ್ಲೆಡೆ ಹೋಗುವ ಅವಕಾಶವಿದೆ. ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶದ ಯಾವುದೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಸಮಸ್ಯೆಯಿಲ್ಲ. ಈ ಹಿಂದೆ ಎರಡು ಲಸಿಕೆ ಉತ್ಪಾದನೆ ಕೇಂದ್ರಗಳಿದ್ದವು. ಆದರೆ ಈಗ ದೇಶದಲ್ಲಿ ಐದು ಲಸಿಕೆ ಉತ್ಪಾದನಾ ಕೇಂದ್ರಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm