ಬ್ರೇಕಿಂಗ್ ನ್ಯೂಸ್
18-07-21 09:11 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 18: ಲಾಕ್ಡೌನ್ ಕಾರಣ ಇರಾನ್ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸರಕು ಹಡಗಿನಲ್ಲಿ ಭಟ್ಕಳ ಮೂಲದ ಕಾರ್ಮಿಕ ಸಿಲುಕಿದ್ದು ಕೈಯಲ್ಲಿ ವೀಸಾ ಮತ್ತು ಮರಳಿ ಬರಲು ಹಣ ಇಲ್ಲದೆ ಸಂಕಷ್ಟಕ್ಕೀಡಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಯಾಸೀನ್ ಷಾ (31) ಎನ್ನುವಾತ ಒಂದೂವರೆ ವರ್ಷದಿಂದ ಇರಾನ್ನ ಬಂದರಿನಲ್ಲಿ ಸಿಲುಕಿದ್ದಾನೆ.
ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತ್ತಿದ್ದ ಯಾಸೀನ್, 2020ರ ಜನವರಿಯಲ್ಲಿ ಇರಾನ್ ಬಂದರಿನಲ್ಲಿ ಇಳಿದಿದ್ದ. ಕೋವಿಡ್ ಕಾರಣದಿಂದ ಹಡಗನ್ನು ಬಂದರಿನಲ್ಲೇ ಲಂಗರು ಹಾಕಲಾಗಿತ್ತು. ಹಡಗು ಮೂವರ ಪಾಲುದಾರಿಕೆ ಹೊಂದಿದ್ದು, ಮಾಲೀಕರ ನಡುವಿನ ವಿವಾದದ ಕಾರಣದಿಂದ ಒಂದೂವರೆ ವರ್ಷದಿಂದ ಅಲ್ಲಿಯೇ ಉಳಿದುಕೊಂಡಿದೆ. ಭಟ್ಕಳ ಮೂಲದ ಕಾರ್ಮಿಕನ ಬಗ್ಗೆಯೂ ಯಾರೂ ಕೇರ್ ವಹಿಸಿಲ್ಲ. ಜೊತೆಗೆ ಒಂದು ವರ್ಷಗಳ ವೇತನವನ್ನೂ ನೀಡದೆ ಉಳಿಸಿಕೊಂಡಿದ್ದಾರೆ. ಇದೀಗ ಸರಕು ಹಡಗುಗಳ ಚಲನೆ ಪುನರಾರಂಭ ಗೊಂಡಿದ್ದರೂ ಯಾಸೀನ್ ಇರುವ ಹಡಗು ಅಲ್ಲಿಂದ ತೆರಳಿಲ್ಲ ಎನ್ನಲಾಗಿದೆ.
ಯಾಸೀನ್ ಇರಾನ್ಗೆ ತೆರಳಲು ಏಜೆನ್ಸಿ ಜೊತೆಗೆ ಮಾಡಿದ್ದ ಒಪ್ಪಂದವನ್ನು ಇರಾನ್ನಲ್ಲಿ ಬದಲಿಸಲಾಗಿತ್ತು. ಬಹುತೇಕ ಇರಾನ್ ಏಜನ್ಸಿಗಳು ಕಾರ್ಮಿಕರಲ್ಲಿ ಪರ್ಸಿಯನ್ ಭಾಷೆಯ ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂಡು, ವೇತನ ಪಾವತಿಸದೆ ಕೆಲಸಗಾರರಿಗೆ ವಂಚಿಸುತ್ತದೆ. ಆದರೆ, ಪರ್ಸಿಯನ್ ಭಾಷೆ ಅಲ್ಪಸ್ವಲ್ಪ ತಿಳಿದಿದ್ದ ಯಾಸೀನ್, ಏಜೆನ್ಸಿಯ ಒಪ್ಪಂದ ಪತ್ರಕ್ಕೆ ಸಹಿ ಹಾಕದೆ ಆಕ್ಷೇಪ ವ್ಯಕ್ತಪಡಿಸಿದ್ದ ಎನ್ನಲಾಗಿದೆ.
ಕಳೆದ ಆರು ತಿಂಗಳಿನಿಂದ ಯಾಸೀನ್ಗೆ ಆಹಾರ ಸಾಮಗ್ರಿಗಳನ್ನೂ ನೀಡುತ್ತಿಲ್ಲ. ಬಂದರಿನಲ್ಲಿ ಲಂಗರು ಹಾಕಿರುವ ಇತರ ಹಡಗುಗಳಿಂದ ಆಹಾರಗಳನ್ನು ಪಡೆದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ತಾನು ಇರಾನ್ನಲ್ಲಿ ಅನುಭವಿಸುತ್ತಿರುವ ಸಂಕಷ್ಟದ ಕುರಿತು ಯಾಸೀನ್ ಭಾರತೀಯ ದೂತಾವಾಸ ಮತ್ತು ಇತರ ಸಂಸ್ಥೆಗಳಿಗೆ ಸಂಪರ್ಕಿಸಿ ಹೇಳಿಕೊಂಡಿದ್ದಾನೆ.
ಭಾರತ ಮತ್ತು ವಿದೇಶದ ಹಲವಾರು ಸಂಸ್ಥೆಗಳು ಯಾಸೀನ್ಗೆ ಸಹಾಯ ಮಾಡಲು ಪ್ರಯತ್ನಿಸುತ್ತಿವೆ. ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಕೆಲವು ಸಂಘಟನೆಗಳು ಸಂಪರ್ಕ ಸಾಧಿಸಿವೆ. ಇರಾನ್ನಲ್ಲಿ ಸಿಲುಕಿರುವ ಭಾರತೀಯನಿಗೆ ವೇತನ ಪಾವತಿಸಿ, ಮರಳಿ ಮನೆಗೆ ಕರೆತರಲು ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಏಮ್ ಇಂಡಿಯಾ ಫೋರಂ ಸ್ಥಾಪಕ ಅಧ್ಯಕ್ಷ ಶೇಖ್ ಮುಜಾಫರ್ ಶಿರಾಲಿ ಒತ್ತಾಯಿಸಿದ್ದಾರೆ.
Bhatkal man trapped in Iran harbour due to lockdown. Yasin from Bhatkal who went to work at Harbour has now been stuck for one year.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm