ಬ್ರೇಕಿಂಗ್ ನ್ಯೂಸ್
18-07-21 09:11 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 18: ಲಾಕ್ಡೌನ್ ಕಾರಣ ಇರಾನ್ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸರಕು ಹಡಗಿನಲ್ಲಿ ಭಟ್ಕಳ ಮೂಲದ ಕಾರ್ಮಿಕ ಸಿಲುಕಿದ್ದು ಕೈಯಲ್ಲಿ ವೀಸಾ ಮತ್ತು ಮರಳಿ ಬರಲು ಹಣ ಇಲ್ಲದೆ ಸಂಕಷ್ಟಕ್ಕೀಡಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಯಾಸೀನ್ ಷಾ (31) ಎನ್ನುವಾತ ಒಂದೂವರೆ ವರ್ಷದಿಂದ ಇರಾನ್ನ ಬಂದರಿನಲ್ಲಿ ಸಿಲುಕಿದ್ದಾನೆ.
ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತ್ತಿದ್ದ ಯಾಸೀನ್, 2020ರ ಜನವರಿಯಲ್ಲಿ ಇರಾನ್ ಬಂದರಿನಲ್ಲಿ ಇಳಿದಿದ್ದ. ಕೋವಿಡ್ ಕಾರಣದಿಂದ ಹಡಗನ್ನು ಬಂದರಿನಲ್ಲೇ ಲಂಗರು ಹಾಕಲಾಗಿತ್ತು. ಹಡಗು ಮೂವರ ಪಾಲುದಾರಿಕೆ ಹೊಂದಿದ್ದು, ಮಾಲೀಕರ ನಡುವಿನ ವಿವಾದದ ಕಾರಣದಿಂದ ಒಂದೂವರೆ ವರ್ಷದಿಂದ ಅಲ್ಲಿಯೇ ಉಳಿದುಕೊಂಡಿದೆ. ಭಟ್ಕಳ ಮೂಲದ ಕಾರ್ಮಿಕನ ಬಗ್ಗೆಯೂ ಯಾರೂ ಕೇರ್ ವಹಿಸಿಲ್ಲ. ಜೊತೆಗೆ ಒಂದು ವರ್ಷಗಳ ವೇತನವನ್ನೂ ನೀಡದೆ ಉಳಿಸಿಕೊಂಡಿದ್ದಾರೆ. ಇದೀಗ ಸರಕು ಹಡಗುಗಳ ಚಲನೆ ಪುನರಾರಂಭ ಗೊಂಡಿದ್ದರೂ ಯಾಸೀನ್ ಇರುವ ಹಡಗು ಅಲ್ಲಿಂದ ತೆರಳಿಲ್ಲ ಎನ್ನಲಾಗಿದೆ.
ಯಾಸೀನ್ ಇರಾನ್ಗೆ ತೆರಳಲು ಏಜೆನ್ಸಿ ಜೊತೆಗೆ ಮಾಡಿದ್ದ ಒಪ್ಪಂದವನ್ನು ಇರಾನ್ನಲ್ಲಿ ಬದಲಿಸಲಾಗಿತ್ತು. ಬಹುತೇಕ ಇರಾನ್ ಏಜನ್ಸಿಗಳು ಕಾರ್ಮಿಕರಲ್ಲಿ ಪರ್ಸಿಯನ್ ಭಾಷೆಯ ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂಡು, ವೇತನ ಪಾವತಿಸದೆ ಕೆಲಸಗಾರರಿಗೆ ವಂಚಿಸುತ್ತದೆ. ಆದರೆ, ಪರ್ಸಿಯನ್ ಭಾಷೆ ಅಲ್ಪಸ್ವಲ್ಪ ತಿಳಿದಿದ್ದ ಯಾಸೀನ್, ಏಜೆನ್ಸಿಯ ಒಪ್ಪಂದ ಪತ್ರಕ್ಕೆ ಸಹಿ ಹಾಕದೆ ಆಕ್ಷೇಪ ವ್ಯಕ್ತಪಡಿಸಿದ್ದ ಎನ್ನಲಾಗಿದೆ.
ಕಳೆದ ಆರು ತಿಂಗಳಿನಿಂದ ಯಾಸೀನ್ಗೆ ಆಹಾರ ಸಾಮಗ್ರಿಗಳನ್ನೂ ನೀಡುತ್ತಿಲ್ಲ. ಬಂದರಿನಲ್ಲಿ ಲಂಗರು ಹಾಕಿರುವ ಇತರ ಹಡಗುಗಳಿಂದ ಆಹಾರಗಳನ್ನು ಪಡೆದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ತಾನು ಇರಾನ್ನಲ್ಲಿ ಅನುಭವಿಸುತ್ತಿರುವ ಸಂಕಷ್ಟದ ಕುರಿತು ಯಾಸೀನ್ ಭಾರತೀಯ ದೂತಾವಾಸ ಮತ್ತು ಇತರ ಸಂಸ್ಥೆಗಳಿಗೆ ಸಂಪರ್ಕಿಸಿ ಹೇಳಿಕೊಂಡಿದ್ದಾನೆ.
ಭಾರತ ಮತ್ತು ವಿದೇಶದ ಹಲವಾರು ಸಂಸ್ಥೆಗಳು ಯಾಸೀನ್ಗೆ ಸಹಾಯ ಮಾಡಲು ಪ್ರಯತ್ನಿಸುತ್ತಿವೆ. ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಕೆಲವು ಸಂಘಟನೆಗಳು ಸಂಪರ್ಕ ಸಾಧಿಸಿವೆ. ಇರಾನ್ನಲ್ಲಿ ಸಿಲುಕಿರುವ ಭಾರತೀಯನಿಗೆ ವೇತನ ಪಾವತಿಸಿ, ಮರಳಿ ಮನೆಗೆ ಕರೆತರಲು ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಏಮ್ ಇಂಡಿಯಾ ಫೋರಂ ಸ್ಥಾಪಕ ಅಧ್ಯಕ್ಷ ಶೇಖ್ ಮುಜಾಫರ್ ಶಿರಾಲಿ ಒತ್ತಾಯಿಸಿದ್ದಾರೆ.
Bhatkal man trapped in Iran harbour due to lockdown. Yasin from Bhatkal who went to work at Harbour has now been stuck for one year.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm