ಬ್ರೇಕಿಂಗ್ ನ್ಯೂಸ್
18-07-21 09:11 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 18: ಲಾಕ್ಡೌನ್ ಕಾರಣ ಇರಾನ್ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸರಕು ಹಡಗಿನಲ್ಲಿ ಭಟ್ಕಳ ಮೂಲದ ಕಾರ್ಮಿಕ ಸಿಲುಕಿದ್ದು ಕೈಯಲ್ಲಿ ವೀಸಾ ಮತ್ತು ಮರಳಿ ಬರಲು ಹಣ ಇಲ್ಲದೆ ಸಂಕಷ್ಟಕ್ಕೀಡಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಯಾಸೀನ್ ಷಾ (31) ಎನ್ನುವಾತ ಒಂದೂವರೆ ವರ್ಷದಿಂದ ಇರಾನ್ನ ಬಂದರಿನಲ್ಲಿ ಸಿಲುಕಿದ್ದಾನೆ.
ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತ್ತಿದ್ದ ಯಾಸೀನ್, 2020ರ ಜನವರಿಯಲ್ಲಿ ಇರಾನ್ ಬಂದರಿನಲ್ಲಿ ಇಳಿದಿದ್ದ. ಕೋವಿಡ್ ಕಾರಣದಿಂದ ಹಡಗನ್ನು ಬಂದರಿನಲ್ಲೇ ಲಂಗರು ಹಾಕಲಾಗಿತ್ತು. ಹಡಗು ಮೂವರ ಪಾಲುದಾರಿಕೆ ಹೊಂದಿದ್ದು, ಮಾಲೀಕರ ನಡುವಿನ ವಿವಾದದ ಕಾರಣದಿಂದ ಒಂದೂವರೆ ವರ್ಷದಿಂದ ಅಲ್ಲಿಯೇ ಉಳಿದುಕೊಂಡಿದೆ. ಭಟ್ಕಳ ಮೂಲದ ಕಾರ್ಮಿಕನ ಬಗ್ಗೆಯೂ ಯಾರೂ ಕೇರ್ ವಹಿಸಿಲ್ಲ. ಜೊತೆಗೆ ಒಂದು ವರ್ಷಗಳ ವೇತನವನ್ನೂ ನೀಡದೆ ಉಳಿಸಿಕೊಂಡಿದ್ದಾರೆ. ಇದೀಗ ಸರಕು ಹಡಗುಗಳ ಚಲನೆ ಪುನರಾರಂಭ ಗೊಂಡಿದ್ದರೂ ಯಾಸೀನ್ ಇರುವ ಹಡಗು ಅಲ್ಲಿಂದ ತೆರಳಿಲ್ಲ ಎನ್ನಲಾಗಿದೆ.
ಯಾಸೀನ್ ಇರಾನ್ಗೆ ತೆರಳಲು ಏಜೆನ್ಸಿ ಜೊತೆಗೆ ಮಾಡಿದ್ದ ಒಪ್ಪಂದವನ್ನು ಇರಾನ್ನಲ್ಲಿ ಬದಲಿಸಲಾಗಿತ್ತು. ಬಹುತೇಕ ಇರಾನ್ ಏಜನ್ಸಿಗಳು ಕಾರ್ಮಿಕರಲ್ಲಿ ಪರ್ಸಿಯನ್ ಭಾಷೆಯ ಒಪ್ಪಂದ ಪತ್ರಕ್ಕೆ ಸಹಿ ಹಾಕಿಸಿಕೊಂಡು, ವೇತನ ಪಾವತಿಸದೆ ಕೆಲಸಗಾರರಿಗೆ ವಂಚಿಸುತ್ತದೆ. ಆದರೆ, ಪರ್ಸಿಯನ್ ಭಾಷೆ ಅಲ್ಪಸ್ವಲ್ಪ ತಿಳಿದಿದ್ದ ಯಾಸೀನ್, ಏಜೆನ್ಸಿಯ ಒಪ್ಪಂದ ಪತ್ರಕ್ಕೆ ಸಹಿ ಹಾಕದೆ ಆಕ್ಷೇಪ ವ್ಯಕ್ತಪಡಿಸಿದ್ದ ಎನ್ನಲಾಗಿದೆ.
ಕಳೆದ ಆರು ತಿಂಗಳಿನಿಂದ ಯಾಸೀನ್ಗೆ ಆಹಾರ ಸಾಮಗ್ರಿಗಳನ್ನೂ ನೀಡುತ್ತಿಲ್ಲ. ಬಂದರಿನಲ್ಲಿ ಲಂಗರು ಹಾಕಿರುವ ಇತರ ಹಡಗುಗಳಿಂದ ಆಹಾರಗಳನ್ನು ಪಡೆದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ತಾನು ಇರಾನ್ನಲ್ಲಿ ಅನುಭವಿಸುತ್ತಿರುವ ಸಂಕಷ್ಟದ ಕುರಿತು ಯಾಸೀನ್ ಭಾರತೀಯ ದೂತಾವಾಸ ಮತ್ತು ಇತರ ಸಂಸ್ಥೆಗಳಿಗೆ ಸಂಪರ್ಕಿಸಿ ಹೇಳಿಕೊಂಡಿದ್ದಾನೆ.
ಭಾರತ ಮತ್ತು ವಿದೇಶದ ಹಲವಾರು ಸಂಸ್ಥೆಗಳು ಯಾಸೀನ್ಗೆ ಸಹಾಯ ಮಾಡಲು ಪ್ರಯತ್ನಿಸುತ್ತಿವೆ. ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಕೆಲವು ಸಂಘಟನೆಗಳು ಸಂಪರ್ಕ ಸಾಧಿಸಿವೆ. ಇರಾನ್ನಲ್ಲಿ ಸಿಲುಕಿರುವ ಭಾರತೀಯನಿಗೆ ವೇತನ ಪಾವತಿಸಿ, ಮರಳಿ ಮನೆಗೆ ಕರೆತರಲು ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಏಮ್ ಇಂಡಿಯಾ ಫೋರಂ ಸ್ಥಾಪಕ ಅಧ್ಯಕ್ಷ ಶೇಖ್ ಮುಜಾಫರ್ ಶಿರಾಲಿ ಒತ್ತಾಯಿಸಿದ್ದಾರೆ.
Bhatkal man trapped in Iran harbour due to lockdown. Yasin from Bhatkal who went to work at Harbour has now been stuck for one year.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm