ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm