ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm