ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am