ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm