ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm