ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm