ಬ್ರೇಕಿಂಗ್ ನ್ಯೂಸ್
03-09-20 06:07 pm Headline Karnataka News Network ಕರ್ನಾಟಕ
ಚಾಮರಾಜನಗರ, ಸೆಪ್ಟೆಂಬರ್ 3: ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಿ, ಮರಳು ಲಾರಿಯ ಅಪಘಾತ ಪ್ರಕರಣವನ್ನು ತಿರುಚಿ ಕರ್ತವ್ಯಲೋಪ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಡಿವೈಎಸ್ಪಿ ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಜೆ.ಮೋಹನ್ ಅವರನ್ನು ಅಮಾನತುಗೊಳಿಸಲಾಗಿದೆ. ಕೆ.ಎಸ್.ಪಿ(ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ ಭುವನೇಂದ್ರ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

ಮೇ 15 ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಮರಾಜನಗರ ತಾಲೋಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ಗೊತ್ತಾಗಿ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ ಟಿಪ್ಪರ್ ಲಾರಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ.
ಆದರೆ ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಾಧಿಕಾರಿಗಳಿಗೆ ತಿಳಿದರೆ ತಮಗೆ ತೊಂದರೆಯಾಗುತ್ತದೆ ಎಂದು ಟಿಪ್ಪರ್ ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು. ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್ಸ್ ಟೇಬಲ್ ನಾಗ ನಾಯಕ ಎಂಬುವರನ್ನು ಅಮಾನತು ಮಾಡಲಾಗಿದೆ.
ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್ ಮೇ 25 ರಂದು ಸಲ್ಲಿಸಿದ್ಡರು. ಡಿವೈಎಸ್ಪಿ ಜೆ.ಮೋಹನ್ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಅಕ್ರಮ ಮರಳು ಸಾಗಾಣಿಕೆದಾರರೊಂದಿಗೆ ಕೈ ಜೋಡಿಸಿದ್ದಾರೆ. ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಅನುವು ಮಾಡಿಕೊಟ್ಟು ಮರಳು ಟಿಪ್ಪರ್ ಲಾರಿ ಅಫಘಾತವಾದರೂ ತಮಗೆ ಸಮಸ್ಯೆಯಾಗಲಿದೆ ಎಂದು ಟಿಪ್ಪರ್ ಲಾರಿಯಲ್ಲಿದ್ದ ಮರಳನ್ನು ತೆರವುಗೊಳಿಸಿ, ಆ ಟಿಪ್ಪರ್ ಲಾರಿಗೆ ಎಂ.ಸ್ಯಾಂಡ್ ತುಂಬಿ ಮೂಲಕ ಪ್ರಕರಣ ತಿರುಚಲು ಪ್ರಯತ್ನಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm