ಬ್ರೇಕಿಂಗ್ ನ್ಯೂಸ್
03-09-20 06:07 pm Headline Karnataka News Network ಕರ್ನಾಟಕ
ಚಾಮರಾಜನಗರ, ಸೆಪ್ಟೆಂಬರ್ 3: ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಿ, ಮರಳು ಲಾರಿಯ ಅಪಘಾತ ಪ್ರಕರಣವನ್ನು ತಿರುಚಿ ಕರ್ತವ್ಯಲೋಪ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಡಿವೈಎಸ್ಪಿ ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಜೆ.ಮೋಹನ್ ಅವರನ್ನು ಅಮಾನತುಗೊಳಿಸಲಾಗಿದೆ. ಕೆ.ಎಸ್.ಪಿ(ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ ಭುವನೇಂದ್ರ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

ಮೇ 15 ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಮರಾಜನಗರ ತಾಲೋಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ಗೊತ್ತಾಗಿ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ ಟಿಪ್ಪರ್ ಲಾರಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ.
ಆದರೆ ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಾಧಿಕಾರಿಗಳಿಗೆ ತಿಳಿದರೆ ತಮಗೆ ತೊಂದರೆಯಾಗುತ್ತದೆ ಎಂದು ಟಿಪ್ಪರ್ ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು. ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್ಸ್ ಟೇಬಲ್ ನಾಗ ನಾಯಕ ಎಂಬುವರನ್ನು ಅಮಾನತು ಮಾಡಲಾಗಿದೆ.
ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್ ಮೇ 25 ರಂದು ಸಲ್ಲಿಸಿದ್ಡರು. ಡಿವೈಎಸ್ಪಿ ಜೆ.ಮೋಹನ್ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಅಕ್ರಮ ಮರಳು ಸಾಗಾಣಿಕೆದಾರರೊಂದಿಗೆ ಕೈ ಜೋಡಿಸಿದ್ದಾರೆ. ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಅನುವು ಮಾಡಿಕೊಟ್ಟು ಮರಳು ಟಿಪ್ಪರ್ ಲಾರಿ ಅಫಘಾತವಾದರೂ ತಮಗೆ ಸಮಸ್ಯೆಯಾಗಲಿದೆ ಎಂದು ಟಿಪ್ಪರ್ ಲಾರಿಯಲ್ಲಿದ್ದ ಮರಳನ್ನು ತೆರವುಗೊಳಿಸಿ, ಆ ಟಿಪ್ಪರ್ ಲಾರಿಗೆ ಎಂ.ಸ್ಯಾಂಡ್ ತುಂಬಿ ಮೂಲಕ ಪ್ರಕರಣ ತಿರುಚಲು ಪ್ರಯತ್ನಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm